ಮುಸಲ್ಮಾನರನ್ನು ಹಿಂದೂಗಳ ವಿರುದ್ಧ ಪ್ರಚೋದಿಸಿದ ಪ್ರಕರಣ

ಕೊಲಕಾತಾ (ಬಂಗಾಳ) – ರಾಜ್ಯದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಲಾಗಿದೆ. ಮಾರ್ಚ್ 2026 ರಲ್ಲಿ ಬ್ಯಾನರ್ಜಿ ಅವರು ಭಾಷಣವೊಂದರಲ್ಲಿ ಮುಸಲ್ಮಾನರನ್ನು ಹಿಂದೂಗಳ ವಿರುದ್ಧ ಪ್ರಚೋದಿಸಿದ್ದರು. ಮೇ 20 ರಂದು ಕೊಲಕಾತಾ ನಿವಾಸಿ ತುಷಾರ್ ಕಾಂತಿ ದಾಸ್ ಅವರು ಬ್ಯಾನರ್ಜಿ ವಿರುದ್ಧ ದೂರು ನೀಡಿದ್ದರು. ದೂರುದಾರರ ಆರೋಪದಂತೆ, ಬ್ಯಾನರ್ಜಿ ಅವರ ಭಾಷಣದಿಂದಾಗಿ ಆ ಸಮಯದಲ್ಲಿ ಚುನಾವಣೆ ನಡೆಯುತ್ತಿದ್ದ ರಾಜ್ಯದಲ್ಲಿ ಭಯ, ತಪ್ಪು ತಿಳುವಳಿಕೆ ಮತ್ತು ಉದ್ವಿಗ್ನತೆ ಉಂಟಾಗುವ ಸಾಧ್ಯತೆಯಿತ್ತು. ಈ ದೂರಿನ ಆಧಾರದ ಮೇಲೆ ಕೊಲಕಾತಾ ಪೊಲೀಸರು ಜೂನ್ 12 ರಂದು ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಮತಾ ಬ್ಯಾನರ್ಜಿ ಏನು ಹೇಳಿದ್ದರು?
ಮಮತಾ ಬ್ಯಾನರ್ಜಿಯವರು, ‘ನಮ್ಮಿಂದಲೇ (ತೃಣಮೂಲ ಕಾಂಗ್ರೆಸ್ನಿಂದಲೇ) ನೀವೆಲ್ಲರೂ (ಹಿಂದೂಗಳು) ಸುರಕ್ಷಿತವಾಗಿದ್ದೀರಿ. ಒಂದು ವೇಳೆ ನಾವು ಇಲ್ಲಿ (ಅಧಿಕಾರದಲ್ಲಿ) ಇಲ್ಲದ ದಿನ ಬಂದರೆ ಮತ್ತು ಒಂದು ನಿರ್ದಿಷ್ಟ ಸಮುದಾಯ (ಮುಸಲ್ಮಾನರು) ಒಗ್ಗೂಡಿ ನಿಮಗೆ ಮುತ್ತಿಗೆ ಹಾಕಿದರೆ, ಅವರು ನಿಮ್ಮನ್ನು ಮುಗಿಸಲು ಕೇವಲ ಒಂದು ಕ್ಷಣ ಸಾಕು’ ಎಂದು ಹೇಳಿದ್ದರು.
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !