ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ

ಶ್ರೀರಾಮ ಮಂದಿರದ ದೇಣಿಗೆ ಹಣ ಕಳ್ಳತನದ ಆರೋಪದ ಪ್ರಕರಣ

ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದಲ್ಲಿ ಭಕ್ತಾದಿಗಳು ಕಾಣಿಕೆ ಪೆಟ್ಟಿಗೆಗೆ ಹಾಕುತ್ತಿರುವ ದೇಣಿಗೆ ಹಣವನ್ನು ಕಳ್ಳತನ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದು ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರದ ಮೂಲಕ ಆಗ್ರಹಿಸಿದೆ. ಈ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ದೋಷಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದೂ ಟ್ರಸ್ಟ್ ಒತ್ತಾಯಿಸಿದೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ ಯಾದವ ಸೇರಿದಂತೆ ಇತರ ಕೆಲವು ನಾಯಕರು ಈ ಆರೋಪವನ್ನು ಮಾಡಿದ್ದರು.