ತೆಲಂಗಾಣ ಹೈಕೋರ್ಟ್ ಮಹಿಳೆಯೊಬ್ಬರ ವಿಚ್ಛೇದನ ಅರ್ಜಿಯನ್ನು ಸ್ವೀಕರಿಸುವಾಗ ನೀಡಿದ ಪ್ರಮುಖ ವೀಕ್ಷಣೆ

ಭಾಗ್ಯನಗರ (ತೆಲಂಗಾಣ) – ರಾಜ್ಯದ ವಿಚ್ಛೇದನ ಪ್ರಕರಣವೊಂದರಲ್ಲಿ ತೆಲಂಗಾಣ ಹೈಕೋರ್ಟ್ ಮಹತ್ವದ ವೀಕ್ಷಣೆಯನ್ನು ಮಾಡಿದೆ. ಪತಿಯು ವಯಸ್ಸಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿದ್ದರಿಂದ, ಪತ್ನಿಯು ವಯಸ್ಸಿನ ಹೊಂದಾಣಿಕೆ ಮತ್ತು ಜ್ಯೋತಿಷ್ಯಶಾಸ್ತ್ರದ (ಜಾತಕ) ಹೊಂದಾಣಿಕೆಯ ತಪ್ಪು ಕಲ್ಪನೆಯಿಂದ ಮದುವೆಗೆ ಒಪ್ಪಿಗೆ ನೀಡಿದ್ದರು ಎಂದು ನ್ಯಾಯಾಲಯ ಹೇಳಿದೆ. ಇದು ವಂಚನೆಯಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ಸಂಬಂಧಪಟ್ಟ ಮಹಿಳೆಯ ವಿಚ್ಛೇದನ ಅರ್ಜಿಯನ್ನು ಪುರಸ್ಕರಿಸಿದೆ. ಪತಿಯು ತಪ್ಪು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿತ್ತು ಎಂದು ಮಹಿಳೆ ವಾದಿಸಿದ್ದರು.
೧. ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಮತ್ತು ನ್ಯಾಯಮೂರ್ತಿ ಬಿ.ಆರ್. ಮಧುಸೂದನ ರಾವ್ ಅವರ ಪೀಠವು, ‘ಹಿಂದೂ ವಿವಾಹ ಕಾಯ್ದೆ, 1955’ ರ ಸೆಕ್ಷನ್ 12(1)(ಸಿ) ಅಡಿಯಲ್ಲಿ ಪತ್ನಿಯ ಅರ್ಜಿಯನ್ನು ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.
೨. ಈ ದಂಪತಿಗಳ ವಿವಾಹವು 2018 ರಲ್ಲಿ ನಡೆದಿತ್ತು. ಪತಿಯ ನಿಜವಾದ ಜನ್ಮದಿನಾಂಕ 9 ಫೆಬ್ರವರಿ 1974 ಆಗಿದ್ದರೂ, ಆತ 9 ಫೆಬ್ರವರಿ 1981 ಎಂದು ಸುಳ್ಳು ಹೇಳಿದ್ದನು. ಇದು ತನಗೆ ತಡವಾಗಿ ತಿಳಿಯಿತು ಎಂದು ಪತ್ನಿ ಹೇಳಿದ್ದಾರೆ.
೩. ವಿಚ್ಛೇದನ ಆದೇಶವನ್ನು ನೀಡುವಾಗ ಹೈಕೋರ್ಟ್, ಶಾಶ್ವತ ಜೀವನಾಂಶ, ಚಿನ್ನದ ಒಡವೆಗಳನ್ನು ಮರಳಿ ನೀಡುವುದು ಮತ್ತು ರಾಜಿ ಸಂಧಾನದಂತಹ ವಿಷಯಗಳ ಕುರಿತು ಸೂಕ್ತ ವೇದಿಕೆಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಇದರಲ್ಲಿ ಪತ್ನಿಯು ಪತಿಯ ವಿರುದ್ಧ ದಾಖಲಿಸಿರುವ ಕೌಟುಂಬಿಕ ದೌರ್ಜನ್ಯದ ಬಾಕಿ ಇರುವ ಪ್ರಕರಣವೂ ಸೇರಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”