ಗೃಹ ಸಚಿವ ಅಮಿತ್ ಶಹಾ ಅವರಿಂದ ಅಧಿಕಾರಿಗಳಿಗೆ ಆದೇಶ

ನವದೆಹಲಿ – ಗಡಿ ಜಿಲ್ಲೆಗಳಲ್ಲಿ ಆಗುತ್ತಿರುವ ಜನಸಂಖ್ಯಾಶಾಸ್ತ್ರದ ಬದಲಾವಣೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಹಾ ಅವರು ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಜನಸಂಖ್ಯಾಶಾಸ್ತ್ರದ ಬದಲಾವಣೆಗಳ ಕುರಿತು ನಡೆದ ಪ್ರಮುಖ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಇದರೊಂದಿಗೆ, ಪರಿಸ್ಥಿತಿಯ ಪ್ರತ್ಯಕ್ಷ ಪರಿಶೀಲನೆಗಾಗಿ ಗಡಿ ಪ್ರದೇಶಗಳು, ಮೆಟ್ರೋ ನಗರಗಳು ಮತ್ತು ಕೈಗಾರಿಕಾ ನಗರಗಳಿಗೆ ಭೇಟಿ ನೀಡುವಂತೆಯೂ ಅವರು ಸೂಚಿಸಿದ್ದಾರೆ. ಇದಕ್ಕೂ ಮುನ್ನ, ಜೂನ್ 5 ರಂದು ಶಹಾ ಅವರು, “ಬಂಗಾಳ, ತ್ರಿಪುರಾ ಮತ್ತು ಬಿಹಾರ ರಾಜ್ಯಗಳಲ್ಲಿನ ಜನಸಂಖ್ಯಾಶಾಸ್ತ್ರದ ಬದಲಾವಣೆಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದರು. ದೇಶದ ಗಡಿ ಭದ್ರತೆಯಲ್ಲಿನ ಲೋಪದೋಷಗಳನ್ನು ನಿವಾರಿಸಲು ಕೇಂದ್ರ ಸರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದೂ ಅವರು ಇದೇ ವೇಳೆ ಉಲ್ಲೇಖಿಸಿದ್ದಾರೆ.
‘ಸ್ಮಾರ್ಟ್ ಬಾರ್ಡರ್’ (ಸುಧಾರಿತ ಗಡಿ ಭದ್ರತೆ) ಯೋಜನೆ ಅಂತಿಮ ಹಂತದಲ್ಲಿ!
ಅಂತರರಾಷ್ಟ್ರೀಯ ಗಡಿಗಳ ಮೇಲಿನ ನಿಗಾ ಮತ್ತು ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರಕಾರ ಶ್ರಮಿಸುತ್ತಿದೆ ಎಂದು ಹೇಳಿದ ಶಹಾ, ಗಡಿ ನಿರ್ವಹಣೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವಂತೆ ಒತ್ತು ನೀಡಿದರು. ತ್ರಿಪುರಾದ ಲಂಕಾಮುರಾ ಗಡಿ ಚೌಕಿ (Outpost) ಯಲ್ಲಿ ಗಡಿ ಭದ್ರತಾ ಪಡೆಯ (BSF) ಸೈನಿಕರೊಂದಿಗೆ ಸಂವಾದ ನಡೆಸುವಾಗ, ‘ಸ್ಮಾರ್ಟ್ ಬಾರ್ಡರ್’ (ಸುಧಾರಿತ ಗಡಿ ಭದ್ರತೆ) ಯೋಜನೆ ಅಂತಿಮ ಹಂತಕ್ಕೆ ತಲುಪಿದೆ ಎಂಬ ಮಾಹಿತಿಯನ್ನು ಅವರು ನೀಡಿದರು. ಈ ಯೋಜನೆಯನ್ನು ದೇಶದ 7 ರಿಂದ 8 ಸ್ಥಳಗಳಲ್ಲಿ ಪ್ರಾಯೋಗಿಕವಾಗಿ (Pilot project) ಜಾರಿಗೊಳಿಸಲಾಗುವುದು. ಇದರಲ್ಲಿ ಅತ್ಯಾಧುನಿಕ ತಂತ್ರಜ್ಞಾನ, ಸ್ಥಳೀಯ ಆಡಳಿತ ಮತ್ತು ಗಡಿ ಭದ್ರತಾ ಪಡೆಗಳ ಸಮನ್ವಯದ ಸಹಭಾಗಿತ್ವ ಇರಲಿದೆ. ಗಡಿ ಭದ್ರತೆಯನ್ನು ಇನ್ನಷ್ಟು ಪರಿಣಾಮಕಾರಿಗೊಳಿಸುವುದರ ಜೊತೆಗೆ, ಜನಸಂಖ್ಯಾಶಾಸ್ತ್ರದ ಬದಲಾವಣೆಗಳ ಮೇಲೆಯೂ ತೀವ್ರ ನಿಗಾ ಇಡಲಾಗುವುದು ಎಂದು ಶಾ ಸ್ಪಷ್ಟಪಡಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ