ಪುರಾತತ್ವ ಇಲಾಖೆಯ ನಿರ್ಲಕ್ಷ್ಯ!

ಫಿರೋಜಾಬಾದ್ (ಉತ್ತರ ಪ್ರದೇಶ) – ಜಿಲ್ಲೆಯ ಕೋಟ್ಲಾದಲ್ಲಿರುವ ವನಖಂಡೇಶ್ವರ ಮಹಾದೇವ ದೇವಸ್ಥಾನದಲ್ಲಿ ಕಳೆದ ವರ್ಷ ಉತ್ಖನನದ ವೇಳೆ ೪೦ ಕಿಲೋಗ್ರಾಂಗಳಿಗಿಂತ ಹೆಚ್ಚು ತೂಕದ ಕುಶಾಣ ಕಾಲದ ನಾಣ್ಯಗಳು ಪತ್ತೆಯಾಗಿದ್ದವು. ಕನಿಷ್ಠ ೨ ಸಾವಿರ ವರ್ಷಗಳಷ್ಟು ಹಳೆಯದು ಎಂದು ಅಂದಾಜಿಸಲಾದ ಈ ನಾಣ್ಯಗಳನ್ನು ತಾಮ್ರದ ಲೋಹದಿಂದ ಮಾಡಲಾಗಿತ್ತು. ಪುರಾತತ್ವ ಇಲಾಖೆಯು ಆ ನಾಣ್ಯಗಳನ್ನು ದೇವಸ್ಥಾನದ ಕೋಣೆಯೊಂದರಲ್ಲಿ ಇರಿಸಿತ್ತು. ಈ ನಾಣ್ಯಗಳನ್ನು ನಂತರ ವಸ್ತುಸಂಗ್ರಹಾಲಯಕ್ಕೆ ಕಳುಹಿಸಲಾಗುವುದು ಎಂದು ಇಲಾಖೆಯ ತಂಡವು ತಿಳಿಸಿತ್ತು.
ಪುರಾತತ್ವ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ನಾಣ್ಯಗಳು ಈಗ ನಾಪತ್ತೆಯಾಗಿವೆ. ಉತ್ತರ ಪ್ರದೇಶ ರಾಜ್ಯ ಪುರಾತತ್ವ ಇಲಾಖೆಯ ನಿರ್ಲಕ್ಷ್ಯದಿಂದಲೇ ಇದು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ನಾಣ್ಯಗಳನ್ನು ಪರಿಶೀಲಿಸಲು ತಂಡವೊಂದು ಬಂದಾಗ, ಅವು ದೇವಸ್ಥಾನದ ಕೋಣೆಯಲ್ಲಿ ಪತ್ತೆಯಾಗದ ಕಾರಣ ಅವು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ