ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶ ರಾಜ್ಯವನ್ನು ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯು ಜಿಟಿಜಿಟಿಯಾಗಿ ಕಾಡಿದೆ. ಉನ್ನಾವ ಮತ್ತು ಗಾಜೀಪುರದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದರೆ, ಕಾಸಗಂಜ್‌ನಲ್ಲಿ ಮನೆಯ ಮೇಲ್ಛಾವಣಿ ಕುಸಿದು ಪತಿ, ಪತ್ನಿ ಮತ್ತು ಮಗಳು ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಮಧ್ಯಪ್ರದೇಶದ ಇಟಾರ್ಸಿಯಲ್ಲಿ ಸಂಭವಿಸಿದ ಬಿರುಗಾಳಿ ಮಳೆಯಿಂದಾಗಿ ಆಂಬ್ಯುಲೆನ್ಸ್ ಮೇಲೆ ಮರ ಬಿದ್ದಿದೆ. ರಾಜಸ್ಥಾನದ ಚುರುವಿನಲ್ಲಿ ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ. ಜಾರ್ಖಂಡ್ ಮತ್ತು ಒಡಿಶಾಗೆ ಮುಂಗಾರು ಮಳೆ ಪ್ರವೇಶಿಸಿದ್ದು, ಮುಂದಿನ ಕೆಲವು ದಿನಗಳಲ್ಲಿ ಅದು ಉತ್ತರ ಪ್ರದೇಶ ಮತ್ತು ಛತ್ತೀಸ್‌ಗಢಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿದಿದ್ದರೂ, ತಾಪಮಾನವು 40°C ಗಿಂತ ಮೇಲೆಯೇ ಮುಂದುವರಿದಿದೆ.