
ಕಾಸರಗೋಡು (ಕೇರಳಮ್) – ಮದರಸಾ ಶಿಕ್ಷಕನೊಂದಿಗೆ ಮದುವೆ ನಿಶ್ಚಯವಾಗಿದ್ದರಿಂದ ಮನನೊಂದ ಕೇರಳಮ್ದ ಕಾಸರಗೋಡು ಜಿಲ್ಲೆಯ ಚೆರುವತ್ತೂರಿನ 19 ವರ್ಷದ ಕಾಲೇಜು ಯುವತಿಯೊಬ್ಬಳು ಇಲಿ ಪಾಷಾಣ (ವಿಷ) ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಯುವತಿಯನ್ನು ಕೈತಕ್ಕಾಡ್-ಪಯ್ಯಂಕಿ ಬಿಸ್ಮಿಲ್ಲಾ ರಸ್ತೆಯ ನಿವಾಸಿಗಳಾದ ಯು. ಅಬ್ದುಲ್ ರೆಹಮಾನ್ ಮತ್ತು ಯು. ಎಂ. ಫಾತಿಮಾ ದಂಪತಿಯ ಪುತ್ರಿ ಮುಬಶಿರಾ ಎಂದು ಗುರುತಿಸಲಾಗಿದೆ.
ಮುಬಶಿರಾ ಅಲ್ವರ್ದಾ ಮಹಿಳಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇತ್ತೀಚೆಗಷ್ಟೇ ಆಕೆಯ ಪೋಷಕರು ಮದರಸಾ ಶಿಕ್ಷಕನೊಬ್ಬನೊಂದಿಗೆ ಆಕೆಯ ಮದುವೆಯನ್ನು ನಿಶ್ಚಯಿಸಿದ್ದರು ಮತ್ತು ನಿಶ್ಚಿತಾರ್ಥವೂ ನಡೆದಿತ್ತು. ಚಂದೇರಾ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ವಿಷ ಸೇವಿಸಿದ ಬಳಿಕ ಮುಬಶಿರಾಳನ್ನು ಜೂನ್ 2 ರಂದು ಮಂಗಳೂರಿನ (ಕರ್ನಾಟಕ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಯಿತಾದರೂ, ಜೂನ್ 10 ರಂದು ಸಂಜೆ 5.30 ರ ಸುಮಾರಿಗೆ ಆಕೆ ಮೃತಪಟ್ಟಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು
‘ಒಂದು ವೇಳೆ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ, ಅವರು ಭಾಜಪವನ್ನು ನಿಷೇಧಿಸಲು ಹಿಂಜರಿಯುತ್ತಿರಲಿಲ್ಲ!’
ಬಂಗಾಳ ಸೌರಶಕ್ತಿ ಹಗರಣದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ನಗರಾಧ್ಯಕ್ಷನನ್ನು ಕೇರಳದಿಂದ ಬಂಧನ : Bengal Solar Scam
ಭಾರತೀಯ ಸೇನೆಯ ವಸಾಹತುಶಾಹಿ ಸಂಪ್ರದಾಯಗಳಲ್ಲಿ ಬದಲಾವಣೆ: ಸೇನಾ ಸಮವಸ್ತ್ರದ ಹೊಸ ನಿಯಮಾವಳಿ ಜಾರಿ : Army Uniform 2026