
ಕಾಸರಗೋಡು (ಕೇರಳಮ್) – ಮದರಸಾ ಶಿಕ್ಷಕನೊಂದಿಗೆ ಮದುವೆ ನಿಶ್ಚಯವಾಗಿದ್ದರಿಂದ ಮನನೊಂದ ಕೇರಳಮ್ದ ಕಾಸರಗೋಡು ಜಿಲ್ಲೆಯ ಚೆರುವತ್ತೂರಿನ 19 ವರ್ಷದ ಕಾಲೇಜು ಯುವತಿಯೊಬ್ಬಳು ಇಲಿ ಪಾಷಾಣ (ವಿಷ) ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಯುವತಿಯನ್ನು ಕೈತಕ್ಕಾಡ್-ಪಯ್ಯಂಕಿ ಬಿಸ್ಮಿಲ್ಲಾ ರಸ್ತೆಯ ನಿವಾಸಿಗಳಾದ ಯು. ಅಬ್ದುಲ್ ರೆಹಮಾನ್ ಮತ್ತು ಯು. ಎಂ. ಫಾತಿಮಾ ದಂಪತಿಯ ಪುತ್ರಿ ಮುಬಶಿರಾ ಎಂದು ಗುರುತಿಸಲಾಗಿದೆ.
ಮುಬಶಿರಾ ಅಲ್ವರ್ದಾ ಮಹಿಳಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇತ್ತೀಚೆಗಷ್ಟೇ ಆಕೆಯ ಪೋಷಕರು ಮದರಸಾ ಶಿಕ್ಷಕನೊಬ್ಬನೊಂದಿಗೆ ಆಕೆಯ ಮದುವೆಯನ್ನು ನಿಶ್ಚಯಿಸಿದ್ದರು ಮತ್ತು ನಿಶ್ಚಿತಾರ್ಥವೂ ನಡೆದಿತ್ತು. ಚಂದೇರಾ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ವಿಷ ಸೇವಿಸಿದ ಬಳಿಕ ಮುಬಶಿರಾಳನ್ನು ಜೂನ್ 2 ರಂದು ಮಂಗಳೂರಿನ (ಕರ್ನಾಟಕ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಯಿತಾದರೂ, ಜೂನ್ 10 ರಂದು ಸಂಜೆ 5.30 ರ ಸುಮಾರಿಗೆ ಆಕೆ ಮೃತಪಟ್ಟಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”