‘ನೀಟ್’ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ಅಮರಾವತಿಯಲ್ಲಿ 15 ವಾಹನಗಳ ಬೆಂಗಾವಲು ಪಡೆ!

ಅಮರಾವತಿ – ದೇಶದಲ್ಲಿ ‘ನೀಟ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಂತರ, ಈಗ ಮತ್ತೆ ಜೂನ್ 21 ರಂದು ‘ನೀಟ್’ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಬಯಿನಿಂದ ಹೆಲಿಕಾಪ್ಟರ್ ಮೂಲಕ ಅಮರಾವತಿ ನಗರಕ್ಕೆ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ತರಲಾಯಿತು. ಈ ಸಂದರ್ಭದಲ್ಲಿ 15 ವಾಹನಗಳ ಬೆಂಗಾವಲು ಪಡೆ ಮತ್ತು ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಇಷ್ಟೊಂದು ಬೃಹತ್ ಭದ್ರತೆಯ ನಡುವೆ ಈ ಪ್ರಶ್ನೆಪತ್ರಿಕೆಗಳನ್ನು ಅಮರಾವತಿ ಜಿಲ್ಲಾ ಖಜಾನೆ ಭವನಕ್ಕೆ ತಲುಪಿಸಲಾಯಿತು. ವಿಮಾನ ನಿಲ್ದಾಣದಿಂದ ಖಜಾನೆ ಭವನದವರೆಗಿನ ಸಂಪೂರ್ಣ ಮಾರ್ಗವನ್ನು ಬಿಗಿ ಭದ್ರತೆಯಲ್ಲಿಡಲಾಗಿತ್ತು. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (CISF) ಯೋಧರನ್ನೂ ಸಹ ಅಲ್ಲಿ ನಿಯೋಜಿಸಲಾಗಿತ್ತು.

ಸಂಪಾದಕೀಯ ನಿಲುವು

  • ಒಂದು ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ಇಷ್ಟೊಂದು ದೊಡ್ಡ ವ್ಯವಸ್ಥೆಯನ್ನು ಮಾಡಬೇಕಾಗಿ ಬಂದಿರುವುದು, ಹಿಂದಿನ ಭದ್ರತಾ ಲೋಪಗಳನ್ನೇ ಎತ್ತಿ ತೋರಿಸುತ್ತದೆ. ಇದರಿಂದಾಗಿ ಸರಕಾರಿ ವ್ಯವಸ್ಥೆಯ ಮೇಲೂ ಹೆಚ್ಚುವರಿ ಆರ್ಥಿಕ ಮತ್ತು ಆಡಳಿತಾತ್ಮಕ ಹೊರೆ ಬಿದ್ದಿದೆ!
  • ಪರೀಕ್ಷೆಯ ಫಲಿತಾಂಶ ಬರುವ ಮುನ್ನವೇ ಸಂಬಂಧಪಟ್ಟ ಆರೋಪಿಗಳಿಗೆ ಆದಷ್ಟು ಬೇಗ ಕಠಿಣ ಶಿಕ್ಷೆಯಾಗಿ, ಈ ಪ್ರಕರಣದಲ್ಲೂ ನ್ಯಾಯ ಸಿಗಬೇಕು ಎಂದೇ ವಿದ್ಯಾರ್ಥಿಗಳು ಬಯಸುತ್ತಾರೆ!