ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು

‘ಇಂದಿನ ನಮ್ಮ ಯುವ ಪೀಳಿಗೆಯು ಹೆಚ್ಚಾಗಿ ಭೌತಿಕವಾದಿ ಮತ್ತು ವ್ಯಾವಹಾರಿಕವಾಗಿದೆ. ಅವರು ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿದ್ದಾರೆ. ಹಾಗೆಯೇ ಅವರು ತಮ್ಮ ಧರ್ಮ ಮತ್ತು ಸಂಪ್ರದಾಯಗಳಿಂದ ದೂರ ಹೋಗುತ್ತಿದ್ದಾರೆ’ ಎಂದು ಹಲವು ಬಾರಿ ಹೇಳಲಾಗುತ್ತದೆ. ಇದೆಲ್ಲವೂ ನಿಜವೂ ಇರಬಹುದು; ಆದರೆ ನಾನು ಇನ್ನೂ ಆಶಾವಾದಿಯಾಗಿದ್ದೇನೆ. ನಮ್ಮ ಸುತ್ತಲಿನ ಅನಿಶ್ಚಿತತೆ ಮತ್ತು ಅಸ್ಥಿರತೆ ಹೆಚ್ಚಾದಾಗ, ವ್ಯಕ್ತಿಯು ಸಹಾಯ, ಆಸರೆ ಮತ್ತು ಸ್ಥಿರತೆಯನ್ನು ಪಡೆಯಲು ಅಧ್ಯಾತ್ಮ, ಧರ್ಮ ಹಾಗೂ ದೇವರ ಕಡೆಗೆ ತಿರುಗುತ್ತಾನೆ ಎಂಬ ನಂಬಿಕೆ ನನಗಿದೆ. ಇಂದಿನ ಜಗತ್ತು ತೀವ್ರ ಅನಿಶ್ಚಿತತೆಯ ಮೂಲಕ ಸಾಗುತ್ತಿದೆ, ವಿಶೇಷವಾಗಿ ಯುವ ಪೀಳಿಗೆ. ಈ ಪೀಳಿಗೆಯು ಜಗತ್ತಿನಲ್ಲಿ ವೇಗವಾಗಿ ಆಗುತ್ತಿರುವ ಆಮೂಲಾಗ್ರ ಬದಲಾವಣೆಗಳನ್ನು ಎದುರಿಸುತ್ತಿದೆ. ಕೃತಕ ಬುದ್ಧಿಮತ್ತೆಯಂತಹ ಹೊಸ ತಂತ್ರಜ್ಞಾನದಿಂದಾಗಿ ಈ ಪೀಳಿಗೆಗೆ ಕೆಲಸ ಪಡೆಯುವುದು ಕಷ್ಟವಾಗುತ್ತಿದೆ. ಕೆಲಸದಲ್ಲಿ ಇರುವವರಿಗೂ ಅದನ್ನು ಉಳಿಸಿಕೊಳ್ಳುವುದು ಕಷ್ಟದಾಯಕವಾಗಿದೆ. ಈ ಪರಿಸ್ಥಿತಿಯು ಭಾರತದ ಯುವಕರಿಗೆ ಇನ್ನೂ ಹೆಚ್ಚಿನ ಗಂಭೀರವಾಗಿದೆ. ಜಗತ್ತಿನಲ್ಲೇ ಅತಿ ದೊಡ್ಡ ಯುವ ಜನಸಂಖ್ಯೆ ನಮ್ಮ ದೇಶದಲ್ಲಿ ಇರುವುದರಿಂದ ಸ್ಪರ್ಧೆಯು ತೀವ್ರವಾಗಿದೆ. ಮನುಷ್ಯರು ಮತ್ತು ಸಂಬಂಧಗಳು ಹೆಚ್ಚು ವ್ಯಾವಹಾರಿಕವಾಗುತ್ತಿರುವ ಇಂತಹ ವಾತಾವರಣದಲ್ಲಿ ‘ಯಾರನ್ನು ನಂಬಬೇಕು ?’ ಎಂದು ಗುರುತಿಸುವುದು ಸಹ ಕಷ್ಟಕರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ಯುವ ಪೀಳಿಗೆಯು ಅಧ್ಯಾತ್ಮದ ಕಡೆಗೆ ಒಲವು ತೋರುವ ಸಾಧ್ಯತೆ ತುಂಬಾ ಹೆಚ್ಚಿದೆ. ತಮ್ಮ ಜೀವನಕ್ಕೆ ಸರಿಯಾದ ದಿಕ್ಕನ್ನು ಕಂಡುಕೊಳ್ಳಲು ಅವರು ಅಧ್ಯಾತ್ಮದ ಆಸರೆಯನ್ನು ಪಡೆಯುತ್ತಾರೆ. ಮುಂಬರುವ ದಿನಗಳಲ್ಲಿ ಇದು ದೇಶಕ್ಕೆ ಅತ್ಯಂತ ಸಕಾರಾತ್ಮಕವಾಗಿ ಪರಿಣಮಿಸಲಿದೆ; ಏಕೆಂದರೆ ದೇವರು ಅವರಿಗೆ ಸರಿಯಾದ ಮಾರ್ಗವನ್ನು ತೋರಿಸುತ್ತಾನೆ. ಅವರ ಇಚ್ಛೆಗಳು ಮತ್ತು ಅಗತ್ಯಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳುವುದನ್ನು ಕಲಿಸುವ ಸರಿಯಾದ ಜೀವನಶೈಲಿಯನ್ನು ಅವರಿಗೆ ಕಲಿಸುತ್ತಾನೆ. ಹಾಗೆಯೇ ಕೇವಲ ಸ್ವಂತ ಆಲೋಚನೆಗಳಿಂದ ಆಚೆಗೆ ಬಂದು ಸಮಾಜ ಮತ್ತು ದೇಶದ ಅಗತ್ಯತೆಗಳ ಬಗ್ಗೆ ಯೋಚಿಸುವ ಮನೋಭಾವವನ್ನೂ ಅವರ ಮನಸ್ಸಿನಲ್ಲಿ ಬಿತ್ತುತ್ತಾನೆ.’ – ಸೌ. ಸುಜಾತಾ ಜೋಶಿ, ಮುಂಬಯಿ (೨೮.೧೦.೨೦೨೫)

  • ಕೆಟ್ಟ ಶಕ್ತಿ : ವಾತಾವರಣದಲ್ಲಿ ಉತ್ತಮ ಹಾಗೂ ಕೆಟ್ಟ ಎರಡೂ ಶಕ್ತಿಗಳು ಕಾರ್ಯನಿರತವಾಗಿರುತ್ತವೆ. ಒಳ್ಳೆಯ ಶಕ್ತಿ ಒಳ್ಳೆಯ ಕಾರ್ಯಕ್ಕಾಗಿ ಮಾನವನಿಗೆ ಸಹಾಯ ಮಾಡುತ್ತವೆ ಹಾಗೂ ಕೆಟ್ಟ ಶಕ್ತಿಗಳು ಅವನಿಗೆ ತೊಂದರೆ ಕೊಡುತ್ತವೆ. ಹಿಂದಿನ ಕಾಲದಲ್ಲಿ ಋಷಿಮುನಿಗಳ ಯಜ್ಞಗಳಲ್ಲಿ ರಾಕ್ಷಸರು ವಿಘ್ನಗಳನ್ನು ತಂದಿರುವ ಅನೇಕ ಕಥೆಗಳು ವೇದ -ಪುರಾಣಗಳಲ್ಲಿ ಇರುತ್ತವೆ. ‘ಅಥರ್ವವೇದದಲ್ಲಿ ಅನೇಕ ಕಡೆಗಳಲ್ಲಿ ಕೆಟ್ಟ ಶಕ್ತಿ. ಉದಾ. ಅಸುರರು, ರಾಕ್ಷಸರು, ಪಿಶಾಚಿ ಇವರ ಪ್ರತಿಬಂಧದ ಮಂತ್ರಗಳನ್ನು ಹೇಳಲಾಗಿದೆ. ಕೆಟ್ಟ ಶಕ್ತಿಗಳ ತೊಂದರೆಯ ನಿವಾರಣೆಗಾಗಿ ವಿವಿಧ ಆಧ್ಯಾತ್ಮಿಕ ಉಪಾಯಗಳನ್ನು ವೇದ ಮತ್ತು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.
  • ಆಧ್ಯಾತ್ಮಿಕ ತೊಂದರೆ : ಇದರರ್ಥ ವ್ಯಕ್ತಿಯಲ್ಲಿ ನಕಾರಾತ್ಮಕ ಸ್ಪಂದನಗಳಿರುವುದು. ವ್ಯಕ್ತಿಯಲ್ಲಿ ನಕಾರಾತ್ಮಕ ಸ್ಪಂದನಗಳು ಶೇ. ೫೦ ರಷ್ಟು ಅಥವಾ ಅದಕ್ಕಿಂತ ಹೆಚ್ಚು ಪ್ರಮಾಣದಲ್ಲಿರುವುದು ಎಂದರೆ ತೀವ್ರ ತೊಂದರೆ, ನಕಾರಾತ್ಮಕ ಸ್ಪಂದನಗಳು ಶೇ. ೩೦ ರಿಂದ ಶೇ ೪೯ ರಷ್ಟು ಇರುವುದು ಎಂದರೆ ಮಧ್ಯಮ ತೊಂದರೆ, ಶೇ. ೩೦ ಕ್ಕಿಂತ ಕಡಿಮೆಯಿರುವುದು ಅಂದರೆ ಮಂದ ಆಧ್ಯಾತ್ಮಿಕ ತೊಂದರೆ ಇರುವುದಾಗಿದೆ. ಆಧ್ಯಾತ್ಮಿಕ ತೊಂದರೆಯು ಪ್ರಾರಬ್ಧ, ಪೂರ್ವಜರ ತೊಂದರೆ ಇತ್ಯಾದಿ ಆಧ್ಯಾತ್ಮಿಕ ಸ್ತರದ ಕಾರಣಗಳಿಂದ ಆಗುತ್ತದೆ. ಆಧ್ಯಾತ್ಮಿಕ ತೊಂದರೆಗಳನ್ನು ಸಂತರು ಅಥವಾ ಸೂಕ್ಷ್ಮ ಸ್ಪಂದನಗಳನ್ನು ಅರಿಯುವ ಸಾಧಕರು ಕಂಡು ಹಿಡಿಯಬಲ್ಲರು.
  • ಸೂಕ್ಷ್ಮ : ಪ್ರತ್ಯಕ್ಷ ಕಾಣುವ ಅವಯವಗಳಾದ ಮೂಗು, ಕಿವಿ, ಕಣ್ಣುಗಳು, ನಾಲಿಗೆ ಮತ್ತು ಚರ್ಮ ಇವು ಪಂಚಜ್ಞಾನೇಂದ್ರಿಯಗಳಾಗಿವೆ. ಈ ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿ ಇವುಗಳ ಆಚೆಗಿನ ಎಂದರೆ ಸೂಕ್ಷ್ಮ. ಸಾಧನೆಯಲ್ಲಿ ಪ್ರಗತಿ ಮಾಡಿಕೊಂಡ ಕೆಲವು ವ್ಯಕ್ತಿಗಳಿಗೆ ಈ ಸೂಕ್ಷ್ಮ ಸಂವೇದನೆಯ ಅರಿವಾಗುತ್ತದೆ. ಈ ಸೂಕ್ಷ್ಮ ಜ್ಞಾನದ ಬಗ್ಗೆ ವಿವಿಧ ಧರ್ಮಗ್ರಂಥಗಳಲ್ಲಿ ಉಲ್ಲೇಖವಿದೆ