ಕೊಲಕಾತಾ ವಿಮಾನ ನಿಲ್ದಾಣದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಭಾಜಪ ಕಾರ್ಯಕರ್ತರ ನಡುವೆ ಘರ್ಷಣೆ

ಕೊಲಕಾತಾ (ಬಂಗಾಳ) – ಇಲ್ಲಿನ ವಿಮಾನ ನಿಲ್ದಾಣದಲ್ಲಿ ತೃಣಮೂಲ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಸ್ವಾಗತಿಸಲು ಬಂದಿದ್ದ ತೃಣಮೂಲ ಕಾಂಗ್ರೆಸ್ಸಿನ ಮತ್ತು ಭಾಜಪ ಕಾರ್ಯಕರ್ತರ ನಡುವೆ ೧೯ ಜೂನ್ ರಾತ್ರಿ ಘರ್ಷಣೆ ನಡೆದಿದೆ. ಈ ವೇಳೆ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಬ್ಯಾನರ್ಜಿ ಅವರು ನವದೆಹಲಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಹಿಂತಿರುಗುತ್ತಿದ್ದರು.

ಅಭಿಷೇಕ್ ಬ್ಯಾನರ್ಜಿ ಅವರ ಬೆಂಬಲಿಗರೊಬ್ಬರು, “ಭಾಜಪಗೆ ಸೇರಿದ ಕೆಲವು ವ್ಯಕ್ತಿಗಳು ವಿಮಾನ ನಿಲ್ದಾಣಕ್ಕೆ ಬಂದು ತೃಣಮೂಲ ಕಾರ್ಯಕರ್ತರೊಂದಿಗೆ ಅನುಚಿತವಾಗಿ ವರ್ತಿಸಲು ಆರಂಭಿಸಿದರು. ಅವರ ಕೈಯಲ್ಲಿ ಮೊಟ್ಟೆಗಳಿದ್ದವು ಮತ್ತು ನಂತರ ಅವರು ಆಯುಧಗಳನ್ನು ಹೊರತೆಗೆದರು, ಎಂದು ಆರೋಪಿಸಿದ್ದಾರೆ. ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಭದ್ರತಾ ವ್ಯವಸ್ಥೆ ಇದ್ದಾಗಲೂ ಆಯುಧಗಳು ಒಳಗೆ ಹೇಗೆ ಬಂದವು?”, ಎಂದು ಅವರು ಪ್ರಶ್ನಿಸಿದ್ದಾರೆ.