ನ್ಯಾಯಾಲಯವು ಸಮನ್ಸ್ ಮತ್ತು ವಾರೆಂಟ್ ಜಾರಿಗೊಳಿಸಿದರೂ ಪ್ರಕಾಶ ರಾಜ್ ಅವರಿಂದ ನಿರ್ಲಕ್ಷ್ಯ

ಬೆಂಗಳೂರು – ಬಹುಭಾಷಾ ನಟ ಪ್ರಕಾಶ ರಾಜ್ ಅವರು ಒಂದೇ ಹೆಸರಿನಲ್ಲಿ 4 ಮತದಾರರ ಗುರುತಿನ ಚೀಟಿಗಳನ್ನು ಪಡೆದಿದ್ದಾರೆ ಎಂಬ ಆರೋಪವಿದ್ದು, ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
1. ದಿಲೀಪ ಕುಮಾರ್ ಎಂಬುವವರು ಸಲ್ಲಿಸಿದ ದೂರಿನ ನಂತರ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಪ್ರಕಾಶ ರಾಜ್ ಒಂದೇ ಹೆಸರಿನಲ್ಲಿ 4 ಮತದಾರರ ಗುರುತಿನ ಚೀಟಿಗಳನ್ನು ಪಡೆದಿದ್ದಾರೆ ಎಂದು ದಿಲೀಪ್ ಕುಮಾರ್ ಆರೋಪಿಸಿದ್ದಾರೆ.
2. ಇದರ ನಂತರ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕಾಶ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು.
3. ಎರಡು ಬಾರಿ ಸಮನ್ಸ್ ಮತ್ತು ಎರಡು ಬಾರಿ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದರೂ ಪ್ರಕಾಶ ರಾಜ್ ನ್ಯಾಯಾಲಯಕ್ಕೆ ಹಾಜರಾಗದ ಕಾರಣ, ನ್ಯಾಯಾಲಯವು ಮೂರನೇ ಬಾರಿಗೆ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
4. ಪ್ರಕಾಶ ರಾಜ್ ಅವರು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಈ 4 ರಾಜ್ಯಗಳಲ್ಲಿ ಅಕ್ರಮವಾಗಿ ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂಬ ಗಂಭೀರ ಆರೋಪವಿದೆ. ಸಂವಿಧಾನದ ಪ್ರಕಾರ, ಯಾವುದೇ ವ್ಯಕ್ತಿಗೆ ದೇಶದ ಯಾವುದೇ ಭಾಗದಲ್ಲಿ ಕೇವಲ ಒಂದು ಮತದಾರರ ಗುರುತಿನ ಚೀಟಿ ಹೊಂದಲು ಮಾತ್ರ ಅನುಮತಿಯಿದೆ; ಆದರೆ ನಟ ಪ್ರಕಾಶ ರಾಜ್ ಅವರು 4 ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
5. ಸಮನ್ಸ್ ಮತ್ತು ವಾರೆಂಟ್ ಅನ್ನು ನಿರ್ಲಕ್ಷಿಸಿ ನ್ಯಾಯಾಲಯಕ್ಕೆ ಹಾಜರಾಗದ ಕಾರಣ, ನ್ಯಾಯಾಲಯವು ಪ್ರಕಾಶ ರಾಜ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ದೇವಸ್ಥಾನಗಳ ಹಣದಿಂದ ನಿರ್ಮಿಸಲಾಗುತ್ತಿದ್ದ ವಾಣಿಜ್ಯ ಸಂಕೀರ್ಣಗಳ ಯೋಜನೆಗಳು ರದ್ದು !
ದೆಹಲಿಯಲ್ಲಿ ರೈಲು ಹತ್ತುವ ವಿಷಯದ ಜಗಳ: ಪ್ರಯಾಣಿಕನ ಕೊಲೆ
ನಾಲಾಸೋಪಾರಾದಲ್ಲಿ ಇಬ್ಬರು ಮುಸ್ಲಿಂ ಮಾದಕವಸ್ತು ಕಳ್ಳಸಾಗಾಣಿಕೆದಾರರ ಬಂಧನ
ತೃಣಮೂಲ ಕಾಂಗ್ರೆಸ್ನ ೩ ಬ್ಯಾಂಕ್ ಖಾತೆಗಳು ಸ್ಥಗಿತ!
Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !