ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi

ಭಾರತವನ್ನು ‘ಹಿಂದೂ ರಾಷ್ಟ್ರವಾಗಲು ಬಿಡಬೇಡಿ’ ಎಂದು ಹೇಳಿದ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ತಿರುಗೇಟು

ಎಡದಿಂದ ಸಿದ್ದರಾಮಯ್ಯ ಮತ್ತು ಪ್ರಲ್ಹಾದ್ ಜೋಶಿ.

ಬೆಂಗಳೂರು – ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ೨೧ ರಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ‘ಏನೇ ಆದರೂ ಭಾರತವು ಹಿಂದೂ ರಾಷ್ಟ್ರವೇ ಆಗಿದೆ’ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು, ಸಂವಿಧಾನವನ್ನು ಉಳಿಸಲು ನಾವೆಲ್ಲರೂ ಭಾಜಪ ಮತ್ತು ಆರ್‌ಎಸ್‌ಎಸ್ ವಿರುದ್ಧ ಒಗ್ಗೂಡಿ ಹೋರಾಡಬೇಕು ಎಂದು ಹೇಳಿದ್ದರು. (ಸಂವಿಧಾನವನ್ನು ಹದಗೆಡಿಸಿದ್ದೇ ಕಾಂಗ್ರೆಸ್‌ನವರು, ಅಂತಹವರು ಈಗ ಸಂವಿಧಾನವನ್ನು ಉಳಿಸುವ ಬಗ್ಗೆ ಬೊಬ್ಬೆ ಹೊಡೆಯುತ್ತಿದ್ದಾರೆ! – ಸಂಪಾದಕರು) ವೈವಿಧ್ಯತೆಯನ್ನು ಕಾಪಾಡಬೇಕು ಮತ್ತು ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದರು. (ವೈವಿಧ್ಯತೆಯ ಹೆಸರಿನಲ್ಲಿ ಹಿಂದೂಗಳ ಮೇಲಿನ ಅನ್ಯಾಯವನ್ನು ಇನ್ನು ಮುಂದೆ ಹಿಂದೂಗಳು ಸಹಿಸುವುದಿಲ್ಲ. ಅದಕ್ಕಾಗಿಯೇ ಕಾಂಗ್ರೆಸ್ ಅವನತಿಯ ಹಾದಿಯಲ್ಲಿದೆ! – ಸಂಪಾದಕರು)

ಜೋಶಿ ಅವರು ಮಾತನಾಡಿ, ಇಲ್ಲಿ ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವುದರಿಂದಲೇ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದು ಸಿದ್ದರಾಮಯ್ಯ ಅವರಿಗೆ ತಿಳಿದಿದೆ ಎಂದು ಹೇಳಿದರು. (ಈ ಪ್ರಜಾಪ್ರಭುತ್ವವು ಜಾತ್ಯತೀತವಾಗಿರುವುದರಿಂದ ಇಂದು ಭಾರತದಲ್ಲಿ ಹಿಂದೂಗಳು ಅಸುರಕ್ಷಿತರಾಗಿದ್ದಾರೆ, ಇದು ವಾಸ್ತವ! – ಸಂಪಾದಕರು) ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ದೇಶಗಳನ್ನು ನೋಡಿ, ಅಲ್ಲಿ ಪ್ರಜಾಪ್ರಭುತ್ವವೇ ಇಲ್ಲ, ಎಂದು ಹೇಳಿದರು.