ಭಾರತವನ್ನು ‘ಹಿಂದೂ ರಾಷ್ಟ್ರವಾಗಲು ಬಿಡಬೇಡಿ’ ಎಂದು ಹೇಳಿದ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ತಿರುಗೇಟು

ಬೆಂಗಳೂರು – ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ೨೧ ರಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ‘ಏನೇ ಆದರೂ ಭಾರತವು ಹಿಂದೂ ರಾಷ್ಟ್ರವೇ ಆಗಿದೆ’ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು, ಸಂವಿಧಾನವನ್ನು ಉಳಿಸಲು ನಾವೆಲ್ಲರೂ ಭಾಜಪ ಮತ್ತು ಆರ್ಎಸ್ಎಸ್ ವಿರುದ್ಧ ಒಗ್ಗೂಡಿ ಹೋರಾಡಬೇಕು ಎಂದು ಹೇಳಿದ್ದರು. (ಸಂವಿಧಾನವನ್ನು ಹದಗೆಡಿಸಿದ್ದೇ ಕಾಂಗ್ರೆಸ್ನವರು, ಅಂತಹವರು ಈಗ ಸಂವಿಧಾನವನ್ನು ಉಳಿಸುವ ಬಗ್ಗೆ ಬೊಬ್ಬೆ ಹೊಡೆಯುತ್ತಿದ್ದಾರೆ! – ಸಂಪಾದಕರು) ವೈವಿಧ್ಯತೆಯನ್ನು ಕಾಪಾಡಬೇಕು ಮತ್ತು ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದರು. (ವೈವಿಧ್ಯತೆಯ ಹೆಸರಿನಲ್ಲಿ ಹಿಂದೂಗಳ ಮೇಲಿನ ಅನ್ಯಾಯವನ್ನು ಇನ್ನು ಮುಂದೆ ಹಿಂದೂಗಳು ಸಹಿಸುವುದಿಲ್ಲ. ಅದಕ್ಕಾಗಿಯೇ ಕಾಂಗ್ರೆಸ್ ಅವನತಿಯ ಹಾದಿಯಲ್ಲಿದೆ! – ಸಂಪಾದಕರು)
ಜೋಶಿ ಅವರು ಮಾತನಾಡಿ, ಇಲ್ಲಿ ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವುದರಿಂದಲೇ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದು ಸಿದ್ದರಾಮಯ್ಯ ಅವರಿಗೆ ತಿಳಿದಿದೆ ಎಂದು ಹೇಳಿದರು. (ಈ ಪ್ರಜಾಪ್ರಭುತ್ವವು ಜಾತ್ಯತೀತವಾಗಿರುವುದರಿಂದ ಇಂದು ಭಾರತದಲ್ಲಿ ಹಿಂದೂಗಳು ಅಸುರಕ್ಷಿತರಾಗಿದ್ದಾರೆ, ಇದು ವಾಸ್ತವ! – ಸಂಪಾದಕರು) ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ದೇಶಗಳನ್ನು ನೋಡಿ, ಅಲ್ಲಿ ಪ್ರಜಾಪ್ರಭುತ್ವವೇ ಇಲ್ಲ, ಎಂದು ಹೇಳಿದರು.
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಹಿಂದೂ ಧರ್ಮದ ವಿಭಜನೆಗಾಗಿ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರ! – ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಭಾಜಪ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿಷನ್-2047 ಪ್ರಕಾರ ಎಲ್ಲಾ ಭಯೋತ್ಪಾದಕರು ಹೊರಬಂದು ಆಡಳಿತವನ್ನು ಉರುಳಿಸಲಿದ್ದಾರೆ!
ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯವೆಂದು ಘೋಷಣೆಯಾಗುವ ಸಾಧ್ಯತೆ
ಮನೆ ಮೇಲೆ ಬಂದಿದ್ದ ರೆಂಬೆಗಳನ್ನು ತೆರವುಗೊಳಿಸದ ಕಾರಣ, ಮರ ಕಡಿಯುವ ಯತ್ನದಲ್ಲಿ ಮಹಿಳೆಯ ಸಾವು