
ಮುಂಬಯಿ, ಜೂನ್ ೨೩ (ಸುದ್ದಿ) – ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸೂಚನೆಯ ಮೇರೆಗೆ, ಸಮಾನ ನಾಗರಿಕ ಸಂಹಿತೆಯ ಕರಡನ್ನು ಸಿದ್ಧಪಡಿಸಲು ಮುಂಬಯಿ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು. ಈ ಸಮಿತಿಯ ವರದಿ ಬಂದ ನಂತರ ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲು ಸರಕಾರ ಸಕಾರಾತ್ಮಕವಾಗಿದೆ, ಎಂದು ಗೃಹ ರಾಜ್ಯ ಸಚಿವ (ನಗರ) ಯೋಗೇಶ್ ಕದಮ್ ಅವರು ಜೂನ್ ೨೩ ರಂದು ವಿಧಾನಸಭೆಯಲ್ಲಿ ಮಾಹಿತಿ ನೀಡಿದರು. ಭಾಜಪದ ಶಾಸಕಿ ಸೌ. ದೇವಯಾನಿ ಫರಾಂದೆ ಅವರು ‘ರಾಜ್ಯದಲ್ಲಿ ತ್ರಿವಳಿ ತಲಾಖ್ನಂತಹ ಕೆಟ್ಟ ಪದ್ಧತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು,’ ಎಂದು ವಿಧಾನಸಭೆಯಲ್ಲಿ ಗಮನಸೆಳೆಯುವ ಸೂಚನೆ ಮಂಡಿಸಿದ್ದರು. ಈ ಸೂಚನೆಗೆ ಉತ್ತರಿಸಿದ ರಾಜ್ಯ ಸಚಿವ ಯೋಗೇಶ ಕದಮ್ ಅವರು, “ಸಮಾನ ನಾಗರಿಕ ಸಂಹಿತೆಯು ಎಲ್ಲಾ ಧರ್ಮದವರಿಗೂ ಅನ್ವಯಿಸಲಿದೆ. ಇದರ ಮೂಲಕ ಮುಸ್ಲಿಂ ಧರ್ಮದಲ್ಲಿರುವ ಬಹುಪತ್ನಿತ್ವ ಪದ್ಧತಿಗೂ ಕಡಿವಾಣ ಬೀಳಲಿದೆ,” ಎಂದು ಸದನದಲ್ಲಿ ತಿಳಿಸಿದರು.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಅಕೋಲಾ: ಗೋರಕ್ಷಕರೊಂದಿಗೆ ವಾದಕ್ಕಿಳಿದ ಮುಸಲ್ಮಾನರು; ಮುಸಲ್ಮಾನನನ್ನು ಬಿಟ್ಟಿದ್ದಾರೆಂದು ಆರೋಪಿಸಿದ ಭಾಜಪ!