ಶ್ರೀರಾಮಮಂದಿರವನ್ನು ಬಾಂಬ್‌ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ

ಮೊಬೈಲ್‌ನಲ್ಲಿ ಪಾಕಿಸ್ತಾನದ ದೂರವಾಣಿ ನಂಬರ್‌ಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗಿರುವ ಚಿತ್ರಗಳು ಪತ್ತೆ

ದಾವಣಗೆರೆ – ಅಯೋಧ್ಯೆಯ ಶ್ರೀರಾಮಮಂದಿರವನ್ನು ಬಾಂಬ್‌ನಿಂದ ಸ್ಫೋಟಿಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತು ಭಯೋತ್ಪಾದನಾ ನಿಗ್ರಹ ದಳವು ೨೦ ವರ್ಷದ ಸುಹೇಲ್ ಎಂಬ ಭಯೋತ್ಪಾದಕನನ್ನು ಬಂಧಿಸಿವೆ. ಅವನು ಶ್ರೀರಾಮಮಂದಿರವನ್ನು ಗುರಿಯಾಗಿಸಲು ಸಂಚು ರೂಪಿಸಿದ್ದನ್ನು ಒಪ್ಪಿಕೊಂಡಿದ್ದಾನೆ. ಸುಹೇಲ್‌ನ ಮೊಬೈಲ್ ಫೋನ್‌ನಲ್ಲಿ ಪಾಕಿಸ್ತಾನಿ ದೂರವಾಣಿ ಸಂಖ್ಯೆಗಳು, ಅನುಮಾನಾಸ್ಪದ ವಾಟ್ಸಾಪ್ ಗ್ರೂಪ್‌ಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಇರುವ ಫೋಟೋಗಳು ಸಹ ಪತ್ತೆಯಾಗಿವೆ.

ಸುಹೇಲ್‌ನ ಬಂಧನದ ನಂತರ ಪೊಲೀಸರ ತಂಡಗಳು ಸಹರಾನ್‌ಪುರದಲ್ಲೂ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿವೆ. ಸಹರಾನ್‌ಪುರ ಪೊಲೀಸರು ಸುಹೇಲ್‌ನ ತಂದೆಯನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಸುಹೇಲ್ ದಾವಣಗೆರೆಯಲ್ಲಿ ವಾಸವಿದ್ದು ‘ಪೇಂಟರ್’ ಕೆಲಸ ಮಾಡುತ್ತಿದ್ದನು.

ಸಂಪಾದಕೀಯ ನಿಲುವು

ಇಂಥವರನ್ನು ಜೈಲಿನಲ್ಲಿಟ್ಟು ಸಾಕುವ ಬದಲು, ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಗಲ್ಲು ಶಿಕ್ಷೆಯನ್ನೇ ನೀಡಬೇಕು!