ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ : Champat Rai Resignation

ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಹಣ ಕಳ್ಳತನದ ಪ್ರಕರಣ

ಚಂಪತ್ ರೈ

ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದ ಕಾಣಿಕೆ ಹಣ ಕಳ್ಳತನದ ಕುರಿತು ವಿಶೇಷ ತನಿಖಾ ತಂಡವು ಜೂನ್ ೨೨ ರಂದು ಸರಕಾರಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು. ಆ ನಂತರ ಈ ಪ್ರಕರಣದಲ್ಲಿ ದೂರು ದಾಖಲಿಸಲಾಯಿತು, ಹಾಗೆಯೇ ಅದರಲ್ಲಿ ೮ ಜನರನ್ನು ಆರೋಪಿಗಳನ್ನಾಗಿ ಮಾಡಲಾಯಿತು.
ಆ ನಂತರ ಈಗ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರೊಂದಿಗೆ ಟ್ರಸ್ಟ್‌ನ ಪ್ರಮುಖ ಸದಸ್ಯ ಅನಿಲ್ ಮಿಶ್ರಾ ಅವರೂ ಸಹ ರಾಜೀನಾಮೆ ನೀಡಿದ್ದಾರೆ. ವಿಶ್ವಹಿಂದೂ ಪರಿಷತ್ (ವಿಹಿಂಪ) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಜರಂಗ್ ಲಾಲ್ ಬಾಗ್ರಾ ಅವರು ಚಂಪತ್ ರಾಯ್ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ವಿಹಿಂಪದ ಅನೇಕ ಹಿರಿಯ ಪದಾಧಿಕಾರಿಗಳು ಅಯೋಧ್ಯೆಯಲ್ಲಿ ಉಪಸ್ಥಿತರಿದ್ದಾರೆ.

೮ ಜನರಲ್ಲಿ ೭ ಆರೋಪಿಗಳ ಬಂಧನ

ಈ ಪ್ರಕರಣದಲ್ಲಿ ದಾಖಲಾಗಿರುವ ದೂರಿನ ೮ ಆರೋಪಿಗಳ ಪೈಕಿ ೭ ಜನರನ್ನು ಬಂಧಿಸಲಾಗಿದೆ. ಆರೋಪಿಗಳ ಪಟ್ಟಿಯಲ್ಲಿ ಚಂಪತ್ ರಾಯ್ ಅವರ ಆಪ್ತ ಮತ್ತು ಚಾಲಕ ಟಿನ್ನು ಯಾದವ್ ಸಹ ಸೇರಿದ್ದಾನೆ.