ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ

ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದಲ್ಲಿ ಬಂಧಿಸಲಾದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರು ಜೂನ್ 28 ರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದರು. ಇವರಲ್ಲಿ 3-4 ಆರೋಪಿಗಳ ಮನೆಗಳು ಮುಚ್ಚಲ್ಪಟ್ಟಿದ್ದವು; ಪೊಲೀಸರು ಅವರ ನೆರೆಹೊರೆಯವರ ಬಳಿ ವಿಚಾರಣೆ ನಡೆಸಿದರು ಮತ್ತು ಇತರ ಆರೋಪಿಗಳ ಕುಟುಂಬಸ್ಥರನ್ನೂ ವಿಚಾರಿಸಿದರು.

ಆರೋಪಿ ಅನುಕಲ್ಪ ಮಿಶ್ರಾ ಮನೆಗೆ ಹೊರಗೆ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಅಲ್ಲಿ ಸದ್ಯ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಈ ದಾಳಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ವಿಶೇಷವಾಗಿ ಕಂದಾಯ ಲೆಕ್ಕಿಗರನ್ನು (ರೆವಿನ್ಯೂ ಅಕೌಂಟೆಂಟ್) ಸಹ ಒಳಗೊಳ್ಳಲಾಗಿದೆ.