
ಬೆಂಗಳೂರು – ಗಂಡನಿಗಿಂತ ಹೆಚ್ಚು ಆದಾಯವಿರುವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಡಾ. ಚಿಲ್ಲಕೂರು ಸುಮಲತಾ ಅವರು ಮಹತ್ವದ ತೀರ್ಪು ನೀಡಿದ್ದಾರೆ. 2024 ರಲ್ಲಿ ವಿವಾಹವಾಗಿದ್ದ ಈ ದಂಪತಿಗಳು ಕೆಲವೇ ತಿಂಗಳುಗಳಲ್ಲಿ ಪರಸ್ಪರ ಬೇರೆಯಾಗಿದ್ದರು. ಪತ್ನಿಗೆ ಮಕ್ಕಳಾಗಲಿ ಅಥವಾ ಇತರ ಯಾವುದೇ ದೊಡ್ಡ ಜವಾಬ್ದಾರಿಗಳಾಗಲಿ ಇಲ್ಲದಿರುವುದನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಜೀವನಾಂಶದ ಆದೇಶವನ್ನು ರದ್ದುಗೊಳಿಸಿದೆ.
ಪತ್ನಿಯು ಜೀವನಾಂಶವನ್ನು ಪಡೆಯಲು ಕೆಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆ ಸಮಯದಲ್ಲಿ ಗಂಡನ ಸಂಬಳ 60,646 ರೂಪಾಯಿ ಇತ್ತು, ಆದರೆ ಪತ್ನಿಯ ಸಂಬಳ 1 ಲಕ್ಷ ರೂಪಾಯಿ ಇತ್ತು. ಕೆಳ ನ್ಯಾಯಾಲಯವು ಗಂಡನಿಗೆ ಪ್ರತಿ ತಿಂಗಳು 20 ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಆದೇಶಿಸಿತ್ತು. ಈ ಆದೇಶವನ್ನು ಗಂಡನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಉಚ್ಚ ನ್ಯಾಯಾಲಯವು ಕೆಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು. 1 ಲಕ್ಷ ರೂಪಾಯಿ ಸಂಬಳದಲ್ಲಿ ಪತ್ನಿಯು ಸ್ವತಃ ತನ್ನ ಜೀವನವನ್ನು ನಡೆಸಲು ಶಕ್ತಳಾಗಿದ್ದಾಳೆ ಎಂದು ನ್ಯಾಯಾಲಯವು ಹೇಳಿದೆ. ಒಂದು ವೇಳೆ ಗಂಡನ ಸಂಬಳವೇ ಪತ್ನಿಗಿಂತ ಕಡಿಮೆ ಇದ್ದರೆ, ಗಂಡನು ಜೀವನಾಂಶ ನೀಡಲು ಬಾಧ್ಯಸ್ಥನಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಶಾಮಲಿ (ಉತ್ತರಪ್ರದೇಶ) ಇಲ್ಲಿನ ಆಯುಷ ಮಲಿಕನಿಂದ ಇಸ್ಲಾಂ ತೊರೆದು ಪುನಃ ಹಿಂದೂ ಧರ್ಮ ಸ್ವೀಕಾರ ! : Shamili Love Jihad