ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ

ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ಗಾಗಿ ಕೆಲಸ ಮಾಡುತ್ತಿದ್ದ ಆರೋಪ!

ಶ್ರೀನಗರ (ಜಮ್ಮು-ಕಾಶ್ಮೀರ) – ಜುಲೈ 3 ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಪೊಲೀಸರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ಕಥುವಾದಿಂದ ಹಾಜಿ ಲತೀಫ್ ಎಂಬ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಹಾಜಿ ಲತೀಫ್ ಕಳೆದ 20 ವರ್ಷಗಳಿಂದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗಳಿಗಾಗಿ ಕೆಲಸ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

1. ಈತ ಸುಮಾರು 12 ಕ್ಕೂ ಹೆಚ್ಚು ಪಾಕಿಸ್ತಾನಿ ಉಗ್ರರಿಗೆ ಭಾರತದ ಗಡಿಯೊಳಗೆ ನುಗ್ಗಲು ಸಹಾಯ ಮಾಡಿದ್ದನು.

2. ಈತ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ‘ಐ.ಎಸ್.ಐ.’ (ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್) ಅಧಿಕಾರಿಗಳೊಂದಿಗೂ ನೇರ ಸಂಪರ್ಕ ಹೊಂದಿದ್ದನು. ಭಾರತದೊಳಗೆ ನುಸುಳುತ್ತಿದ್ದ ಉಗ್ರರಿಗೆ ಅಡಗಿಕೊಳ್ಳಲು ಸ್ಥಳ ಮತ್ತು ವಾಹನಗಳನ್ನು ಒದಗಿಸುತ್ತಿದ್ದನು. ಬಂಧನದ ನಂತರ ಭದ್ರತಾ ಸಂಸ್ಥೆಗಳು ಈತನನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿವೆ.

3. ಅಮರನಾಥ ಯಾತ್ರೆಯ ಸುರಕ್ಷತೆಗಾಗಿ ಇಡೀ ಜಮ್ಮು-ಕಾಶ್ಮೀರದಲ್ಲಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗಿದೆ. ಭಕ್ತರ ಯಾತ್ರೆ ಸುರಕ್ಷಿತವಾಗಿರಲು ಅಲ್ಲಲ್ಲಿ ‘ಮಾಕ್ ಡ್ರಿಲ್’ (ಭಯೋತ್ಪಾದಕ ದಾಳಿಯನ್ನು ಎದುರಿಸಲು ಪೂರ್ವ ಸಿದ್ಧತಾ ತಾಲೀಮು) ನಡೆಸಲಾಗುತ್ತಿದೆ.