
ಹಾವೇರಿ – ಇಲ್ಲಿನ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ (ವಟ ಪೂರ್ಣಿಮೆ) ಹಬ್ಬ ಆಚರಿಸುತ್ತಿದ್ದಾಗ, ಸಣ್ಣ ಕಾರಣಕ್ಕಾಗಿ ಮತಾಂಧ ಮುಸ್ಲಿಮರು ಹಿಂದೂ ರೈತನೊಬ್ಬನ ಕೈ ಕತ್ತರಿಸಿದ್ದಾರೆ.
೧. ಕಾರ ಹುಣ್ಣಿಮೆ ಹಬ್ಬದ ಅಂಗವಾಗಿ ಎತ್ತುಗಳ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಯುವಕರು ಮತ್ತು ರೈತರು ಉತ್ಸಾಹದಿಂದ ಭಾಗವಹಿಸಿದ್ದರು. ಎತ್ತುಗಳನ್ನು ಓಡಿಸಿಕೊಂಡು ಹೋಗುವ ದಾರಿಯಲ್ಲಿ ಒಂದು ಮಸೀದಿ ಇತ್ತು. ಮಸೀದಿಯ ಬಳಿ ಕೆಲವರು ಪಟಾಕಿ ಸಿಡಿಸಿದರು ಎಂದು ಹೇಳಲಾಗುತ್ತಿದೆ.
೨. ಇದಕ್ಕೆ ಮತಾಂಧ ಮುಸ್ಲಿಮರ ಗುಂಪೊಂದು ಹಿಂದೂ ರೈತರು ಮತ್ತು ಯುವಕರೊಂದಿಗೆ ಜಗಳವಾಡಲು ಆರಂಭಿಸಿತು. ಆಗ ಮತಾಂಧರ ಗುಂಪು ಮಾರಕಾಸ್ತ್ರಗಳಿಂದ ಹಿಂದೂಗಳ ಮೇಲೆ ದಾಳಿ ಮಾಡಿದೆ. ಈ ಘಟನೆಯಲ್ಲಿ ಶಿವರಾಜ್ ಕುರುಬರ್, ನಾಗಪ್ಪ ಕುರುಬರ್, ಮಲ್ಲಪ್ಪ ರಾಯಪ್ಪ, ಲಿಂಗರಾಜ್ ಮಹಾಂತೇಶ್, ಜಯಪ್ಪ ಸಂಗಪ್ಪ, ಲೋಹಿತ್ ರೇವಣಪ್ಪ ಮುಂತಾದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮಾರಣಾಂತಿಕ ದಾಳಿಯ ವೇಳೆ ಮತಾಂಧರು ಓರ್ವ ಹಿಂದೂ ರೈತನ ಕೈಯನ್ನೇ ಕತ್ತರಿಸಿದ್ದಾರೆ.
೩. ಈ ಘಟನೆಯಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
೪. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!