ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಮುರಾದಾಬಾದ್ (ಉತ್ತರ ಪ್ರದೇಶ) – ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಸರಕಾರದ ಅವಧಿಯಲ್ಲಿ ರಾಮಭಕ್ತರ ಮೇಲೆ ಗುಂಡು ಹಾರಿಸಲಾಗಿತ್ತು, ಆದರೆ ಇಂದು ಅಯೋಧ್ಯೆಯ ಸ್ವರೂಪವು ತ್ರೇತಾಯುಗವನ್ನು ನೆನಪಿಸುತ್ತಿದೆ. ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಲ್ಲಿನ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾತನ್ನು ಮುಂದುವರೆಸುತ್ತಾ, ಸಮಾಜವಾದಿ ಪಕ್ಷದ ಸರಕಾರದ ಅವಧಿಯಲ್ಲಿ ಸರಕಾರಿ ಹಣವನ್ನು ಸ್ಮಶಾನಗಳನ್ನು ನಿರ್ಮಿಸಲು ಖರ್ಚು ಮಾಡಲಾಗುತ್ತಿತ್ತು, ಆದರೆ ಈಗ ಅದೇ ಹಣವನ್ನು ದೇವಾಲಯಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಖರ್ಚು ಮಾಡಲಾಗುತ್ತಿದೆ. ಮುರಾದಾಬಾದ್‌ನ ಗುರುತು ಈಗ ಗಲಭೆಗಳಿಂದಲ್ಲ, ಬದಲಿಗೆ ಹಿತ್ತಾಳೆ ಉದ್ಯಮ ಮತ್ತು ರೈತರ ಶ್ರಮದಿಂದಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಬಾಬರ್ ಆಡಳಿತ ಅಥವಾ ಬಾಬರಿ ಸಿದ್ಧಾಂತ ನಡೆಯುವುದಿಲ್ಲ ಎಂಬುದನ್ನು ಸಾರ್ವಜನಿಕರು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.