ಭಾಜಪ ಶಾಸಕ ಅನಿಲ್ ಸಿಂಹ ಅವರಿಂದ ಅಖಿಲೇಶ್ ಯಾದವ್ ವಿರುದ್ಧ ಟೀಕೆ!

ಉನ್ನಾವ (ಉತ್ತರ ಪ್ರದೇಶ) – ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು, ತಮ್ಮ ಸರಕಾರ ಬಂದರೆ ಅಯೋಧ್ಯೆಯನ್ನು ರಾಮನಗರಿಯನ್ನಾಗಿ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ಇದುವರೆಗೆ ಶ್ರೀರಾಮ ಮಂದಿರಕ್ಕೆ ದರ್ಶನಕ್ಕಾಗಿ ಹೋಗದ ವ್ಯಕ್ತಿಯೊಬ್ಬರು ತಾವು ರಾಮನಗರಿಯನ್ನು ನಿರ್ಮಿಸುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಅಖಿಲೇಶ್ ಯಾದವ್ ಅವರಿಗೆ ಶ್ರೀರಾಮ ಮಂದಿರದ ವಿಷಯದ ಕುರಿತು ಮಾತನಾಡಲು ನಾಚಿಕೆಯಾಗಬೇಕು. ಅವರ ಕುಟುಂಬದ ಸದಸ್ಯರ ವಿರುದ್ಧ ಕೇಂದ್ರೀಯ ತನಿಖಾ ದಳದಿಂದ (CBI) ತನಿಖೆ ನಡೆಯುತ್ತಿದೆ. ಒಂದು ಕಾಲವಿತ್ತು, ಅಖಿಲೇಶ್ ಯಾದವ್ ಅವರ ತಂದೆ ಮುಲಾಯಂ ಸಿಂಹ ಯಾದವ್ ಅವರ ಸರಕಾರವು ರಾಮಭಕ್ತರ ಮೇಲೆ ಗುಂಡಿನ ದಾಳಿ ನಡೆಸಿತ್ತು ಮತ್ತು ಇಂದು ಈ ಜನರು ರಾಮನಗರಿಯನ್ನು ನಿರ್ಮಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇಂತಹ ಜನರಿಗೆ 2027 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಾರ್ವಜನಿಕರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಭಾಜಪ ಶಾಸಕ ಅನಿಲ್ ಸಿಂಹ ಟೀಕಿಸಿದ್ದಾರೆ.
ದೇವಸ್ಥಾನದಲ್ಲಿ ಕಳ್ಳತನ ಮಾಡುವವರಿಗೆ ಕ್ಯಾನ್ಸರ್ ಬರುತ್ತದೆ!
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನದ ಪ್ರಕರಣದ ಕುರಿತು ಶಾಸಕ ಅನಿಲ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು, ದೇವಸ್ಥಾನದಲ್ಲಿ ಕಳ್ಳತನ ಮಾಡುವವರಿಗೆ ಕ್ಯಾನ್ಸರ್ ಬರುತ್ತದೆ ಮತ್ತು ಅವರಿಗೆ ದೇವರ ಮನೆಯಿಂದಲೇ ಮರಣದಂಡನೆ ಶಿಕ್ಷೆಯಾಗಲಿದೆ, ಎಂದು ಅವರು ಹೇಳಿದ್ದಾರೆ.
Ram Mandir Theft Confession : ಕಳ್ಳತನದ ಹಣವನ್ನು ಶೌಚಾಲಯದಲ್ಲಿ ಅಡಗಿಸಿಡುತ್ತಿದ್ದೆವು!
ವಿಶೇಷ ನ್ಯಾಯಾಲಯದಿಂದ ಶಾಸಕ ಟಿ. ರಾಜಾ ಸಿಂಗ್ ಖುಲಾಸೆ!
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು