ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ಮಾಡುವವರಿಗೆ ಹಣ ತಲುಪಿಸುತ್ತಿದ್ದವನ ಬಂಧನ

ಜೈಪುರ (ರಾಜಸ್ಥಾನ) – ರಾಜಸ್ಥಾನ ಪೊಲೀಸರ ಅಪರಾಧ ತನಿಖಾ ವಿಭಾಗವು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ.ಗಾಗಿ (ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್) ಕೆಲಸ ಮಾಡುತ್ತಿದ್ದ ರಫೀಕ್ ಚಂದ್ ಶೇಖ್ ಎಂಬ ಸಹಾಯಕನನ್ನು ಬಂಧಿಸಿದೆ. ರಫೀಕ್ ಕಳೆದ ೪ ವರ್ಷಗಳಿಂದ ಐ.ಎಸ್.ಐ.ನ ಸೂಚನೆಯ ಮೇರೆಗೆ ಭಾರತದಲ್ಲಿ ಗೂಢಚಾರಿಕೆ ನಡೆಸುವವರಿಗೆ ಹಣ ತಲುಪಿಸುವ ಕೆಲಸ ಮಾಡುತ್ತಿದ್ದ. ಪಾಕಿಸ್ತಾನದಿಂದ ಬರುವ ಹಣವನ್ನು ಯಾರಿಗೂ ಸಂಶಯ ಬಾರದಂತೆ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಕಳುಹಿಸಲಾಗುತ್ತಿತ್ತು. ಈ ವ್ಯವಸ್ಥೆಯ ಮೂಲಕ ಒಟ್ಟು ಎಷ್ಟು ಮೊತ್ತ ಭಾರತಕ್ಕೆ ಕಳುಹಿಸಲಾಗಿದೆ ಎಂಬುದನ್ನು ತನಿಖಾ ಸಂಸ್ಥೆಗಳು ಪತ್ತೆ ಹಚ್ಚುತ್ತಿವೆ.

ರಫೀಕ್ ಕೇವಲ ತನ್ನ ಹೆಸರಿನಲ್ಲಿ ಮಾತ್ರವಲ್ಲದೆ, ಇತರರ ಹೆಸರಿನಲ್ಲೂ ಕೂಡ ಹಲವು ಬ್ಯಾಂಕ್ ಖಾತೆಗಳನ್ನು ತೆರೆದಿದ್ದನು. ಪಾಕಿಸ್ತಾನದಿಂದ ಬರುವ ಹಣವನ್ನು ಮೊದಲು ಈ ಖಾತೆಗಳಿಗೆ ಕಳುಹಿಸಲಾಗುತ್ತಿತ್ತು. ಈ ಹಣವನ್ನು ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ನಡೆಸಿದ ಅಥವಾ ಸೂಕ್ಷ್ಮ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ತನಿಖೆ ಎದುರಿಸುತ್ತಿದ್ದವರಿಗೆ ತಲುಪಿಸಲಾಗುತ್ತಿತ್ತು.

ಸಂಪಾದಕೀಯ ನಿಲುವು

ಇಂತಹ ದೇಶದ್ರೋಹಿಗಳಿಗೆ ಸಾರ್ವಜನಿಕವಾಗಿ ಗಲ್ಲಿಗೇರಿಸುವ ಶಿಕ್ಷೆ ವಿಧಿಸಬೇಕು !