ದೇವಸ್ಥಾನ ಭೂಮಿ ಉಳಿಸಲು ಸರ್ಕಾರದ ಮಹತ್ವದ ಕ್ರಮ : Karnataka Temple Land

ಬೆಂಗಳೂರು – ಧಾರ್ಮಿಕ ಇಲಾಖೆಯ ‘ಎ’, ‘ಬಿ’ ಮತ್ತು ‘ಸಿ’ ವರ್ಗದ ದೇವಸ್ಥಾನಗಳ ಭೂಮಿ ಒತ್ತುವರಿಯಾಗಿರುವುದು ಕಂಡುಬಂದಿದೆ. ಆದ್ದರಿಂದ ಒತ್ತುವರಿ ತೆರವುಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಪ್ರತಿ ಜಿಲ್ಲೆಯ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದರು. ದೇವಸ್ಥಾನಗಳಲ್ಲಿ ಭಕ್ತರಿಗೆ ದರ್ಶನ ಪಡೆಯಲು, ಪ್ರಸಾದ ಸ್ವೀಕರಿಸಲು ಮತ್ತು ವಸತಿ ವ್ಯವಸ್ಥೆಗೆ ಯಾವುದೇ ತೊಂದರೆಯಾಗಬಾರದು. ಯಾವುದೇ ಕಾರಣಕ್ಕೂ ಅನಗತ್ಯ ವೆಚ್ಚಕ್ಕೆ ಅವಕಾಶ ನೀಡುವುದಿಲ್ಲ. ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದೂ ಅವರು ಹೇಳಿದರು.