
ಶಿವಮೊಗ್ಗ – ಜಿಲ್ಲೆಯ ಹೊಸನಗರ ತಾಲೂಕಿನ ಪಟಗುಪ್ಪಾ ಸೇತುವೆಯ ಬಳಿ ಗೋವಿನ ಕತ್ತು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ೪ ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಲೀಂ ಬಾಳೂರು, ಮಕ್ಬೂಲ್ ಅಹ್ಮದ್ ಬಡಿಗೇರ್, ಸುಲೇಮಾನ್ ಕೊಲಾರಿ ಮತ್ತು ಮಲ್ಲಿಕ್ ರಿಹಾನ್ ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲರೂ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದ ನಿವಾಸಿಗಳಾಗಿದ್ದಾರೆ.
ಹೊಸನಗರ ತಾಲೂಕಿನ ಹೊಸಕೊಪ್ಪಾ ಗ್ರಾಮದ ಬಳಿಯ ಪಟಗುಪ್ಪಾ ಸೇತುವೆಯ ಹತ್ತಿರ ಕೆಲವು ಸಮಾಜವಿರೋಧಿ ಶಕ್ತಿಗಳು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸು ಮತ್ತು ಕರುವನ್ನು ಕೊಲೆ ಮಾಡಿ ಘಟನಾ ಸ್ಥಳದಿಂದ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಗೋಪಾಲಕೃಷ್ಣ ಅವರು ನೀಡಿದ ದೂರಿನ ಮೇರೆಗೆ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ’, ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡು ವಿಶೇಷ ತನಿಖಾ ತಂಡದಿಂದ ತನಿಖೆಯನ್ನು ಕೈಗೊಳ್ಳಲಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !