ಕೆಟ್ಟುಹೋಗಿದ್ದ 'ಹೆಡ್ಲೈಟ್' ನ ದುರಸ್ತಿಗೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ನಿರ್ಲಕ್ಷ್ಯ!

ಕಲಬುರಗಿ – ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬನು ಮೊಬೈಲ್ ಟಾರ್ಚ್ ನ ಬೆಳಕಿನಲ್ಲಿ ಬಸ್ ಚಲಾಯಿಸಿರುವ ಅಘಾತಕಾರಿ ಘಟನೆ ಕಲಬುರಗಿಯಿಂದ ಚಿಂಚೋಳಿ ಮಾರ್ಗದಲ್ಲಿ ನಡೆದಿದೆ. ಈ ಬಸ್ಸಿನ ನಿರ್ವಾಹಕನು (ಕಂಡಕ್ಟರ್) ಮೊಬೈಲ್ ಟಾರ್ಚ್ ಅನ್ನು ಮುಂಭಾಗದಲ್ಲಿ ಹಿಡಿದುಕೊಂಡರೆ, ಚಾಲಕನು ಅದೇ ಬೆಳಕಿನಲ್ಲಿ ೯೦ ಕಿ.ಮೀ. ಬಸ್ ಚಲಾಯಿಸಿದ್ದಾನೆ.
ಕಳೆದ ೧೫ ದಿನಗಳಿಂದ ಈ ಬಸ್ಸಿನ ಹೆಡ್ಲೈಟ್ ಕೆಟ್ಟುಹೋಗಿದ್ದರೂ, ಸಾರಿಗೆ ಸಂಸ್ಥೆಯ ಅಧಿಕಾರಿಗಳು ಅದನ್ನು ಸರಿಪಡಿಸುವ ಕಡೆಗೆ ಗಮನ ಹರಿಸಿಲ್ಲ. ಸಾರಿಗೆ ಅಧಿಕಾರಿಗಳ ಈ ಬೇಜವಾಬ್ದಾರಿತನದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, “ಏನಾದರೂ ಅನಾಹುತ ನಡೆದಿದ್ದರೆ ಯಾರು ಜವಾಬ್ದಾರರು?” ಎಂಬ ಪ್ರಶ್ನೆ ಎದ್ದಿದೆ. ಸಂಬಂಧಪಟ್ಟವರು ತಕ್ಷಣವೇ ಗಮನ ಹರಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ