ಯಾರೇ ಪಾಪ ಮಾಡಿದ್ದರೂ, ಅವರಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು!

ಶ್ರೀರಾಮ ಮಂದಿರ ಕಳ್ಳತನ ಪ್ರಕರಣ; ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಹೇಳಿಕೆ

ಮಹಂತ್ ನೃತ್ಯ ಗೋಪಾಲ್ ದಾಸ್

ಅಯೋಧ್ಯಾ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದಲ್ಲಿ ನಡೆದಿರುವ ಕಳ್ಳತನದಿಂದ ನನಗೆ ಅತ್ಯಂತ ದುಃಖವಾಗಿದೆ. ಯಾರೇ ಪಾಪ ಮಾಡಿದ್ದರೂ, ಅವರಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಇದು ಕೋಟ್ಯಂತರ ಹಿಂದೂಗಳ ಶ್ರದ್ಧೆಯ ಪ್ರಶ್ನೆಯಾಗಿದೆ ಮತ್ತು ಈ ಘಟನೆಯನ್ನು ಬಳಸಿಕೊಂಡು ಯಾವುದೇ ವ್ಯಕ್ತಿ ತನ್ನ ವೈಯಕ್ತಿಕ ಲಾಭಕ್ಕಾಗಿ ರಾಜಕೀಯ ಮಾಡಬಾರದೆಂದು ಎಲ್ಲರಲ್ಲಿ ವಿನಂತಿಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ. ಅವರು ಈ ಪಾಪದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಗೂ ಖಂಡಿತವಾಗಿಯೂ ಶಿಕ್ಷೆ ಕೊಡಿಸುತ್ತಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸದ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಪತ್ರವೊಂದರ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

​ಮಹಂತ್ ನೃತ್ಯ ಗೋಪಾಲ್ ದಾಸ್ ಮಹಾರಾಜರು ಶ್ರೀರಾಮ ಮಂದಿರ ಚಳವಳಿಯ ಪ್ರಮುಖ ಸಂತರಲ್ಲಿ ಒಬ್ಬರಾಗಿದ್ದಾರೆ. ಅವರು ಅಯೋಧ್ಯೆಯ ಪ್ರಸಿದ್ಧ ‘ಮಣಿರಾಮ್ ಛಾವಣಿ’ಯ ಮುಖ್ಯಸ್ಥರೂ ಆಗಿದ್ದಾರೆ. ಇತ್ತೀಚೆಗಷ್ಟೇ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.