ಢಾಕಾ (ಬಾಂಗ್ಲಾದೇಶ) – ನಗರದ ಸಮೀಪವಿರುವ ಸಾವರ್ನಲ್ಲಿ ‘ನ್ಯಾಷನಲ್ ಸಿಟಿಜನ್ಸ್ ಪಾರ್ಟಿ’ಯ (‘ಎನ್.ಸಿ.ಪಿ.’) ಸಭೆಯ ವೇಳೆ ನಡೆದ ಪ್ರಬಲ ಸ್ಫೋಟದಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯ ಪ್ರಕಾರ, ಪಕ್ಷದ ಹಿರಿಯ ನಾಯಕರೊಬ್ಬರು ವೇದಿಕೆಯಿಂದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಸಭೆಯ ಸ್ಥಳದಲ್ಲಾದ ಕಾಲ್ತುಳಿತದಿಂದ ತಮ್ಮ ಪ್ರಾಣ ಉಳಿಸಿಕೊಳ್ಳಲು ಜನರು ಅತ್ತಿತ್ತ ಓಡಲಾರಂಭಿಸಿದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವಿರುದ್ಧ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆಯ ೨ನೇ ವಾರ್ಷಿಕೋತ್ಸವದ ಅಂಗವಾಗಿ ಈ ಸಭೆಯನ್ನು ಆಯೋಜಿಸಲಾಗಿತ್ತು. ಈ ಘಟನೆಯ ನಂತರ ಎನ್.ಸಿ.ಪಿ. ಯು ಅಧಿಕೃತ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ‘ಇದು ನಿಯೋಜಿತ ದಾಳಿಯಾಗಿದೆ’ ಎಂದು ಹೇಳಿದೆ. ಆದರೆ ಆಡಳಿತ ಮಂಡಳಿ ಇನ್ನು ಈ ಹೇಳಿಕೆಯನ್ನು ಖಚಿತಪಡಿಸಿಲ್ಲ. ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳು ಈ ಘಟನೆಯನ್ನು ಎಲ್ಲಾ ಆಯಾಮಗಳಿಂದ ತನಿಖೆ ಮಾಡುತ್ತಿವೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !