
ಮುಂಬಯಿ, ಜುಲೈ ೯ (ವಾರ್ತೆ.) – ನಾಗಪುರದಲ್ಲಿ ಬರಲಿರುವ ಚಳಿಗಾಲದ ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಯ ವಿಧೇಯಕವನ್ನು ತರಲು ಪ್ರಯತ್ನಿಸುತ್ತೇವೆ ಎಂಬ ಮಾಹಿತಿಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ ರವರು ಜುಲೈ ೯ ರಂದು ವಿಧಾನಸಭೆಯಲ್ಲಿ ನೀಡಿದರು. ಈ ಕಾನೂನಿನ ಮಸೂದೆಯನ್ನು ಸಿದ್ಧಪಡಿಸಲು ನೇಮಕ ಮಾಡಲಾದ ಸಮಿತಿಯ ವಿವರಗಳನ್ನು ಮುಖ್ಯಮಂತ್ರಿಗಳು ನೀಡಿದರು.
महाराष्ट्रात समान नागरी कायद्याच्या अंमलबजावणीसाठी सात सदस्यीय समिती गठित.@Dev_Fadnavis#Maharashtra #DevendraFadnavis #UniformCivilCode pic.twitter.com/MHxCSMD6bW
— CMO Maharashtra (@CMOMaharashtra) July 9, 2026
ಸಂವಿಧಾನದಲ್ಲಿ ಪ್ರತಿಯೊಂದು ರಾಜ್ಯಕ್ಕೂ ಏಕರೂಪ ನಾಗರಿಕ ಸಂಹಿತೆಯನ್ನು ಸಿದ್ಧಪಡಿಸಲು ನಿರ್ದೇಶನಗಳನ್ನು ನೀಡಲಾಗಿದೆ. ೨೦೨೬ ರ ಬಜೆಟ್ ಅಧಿವೇಶನದಲ್ಲಿ ಈ ಕಾನೂನಿಗಾಗಿ ಸಮಿತಿಯನ್ನು ರಚಿಸುವುದಾಗಿ ಘೋಷಿಸಲಾಗಿತ್ತು. ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ರಂಜನಾ ದೇಸಾಯಿ ರವರ ಅಧ್ಯಕ್ಷತೆಯಲ್ಲಿ ೭ ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ಮುಂಬಯಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಆರ್.ಸಿ. ಚವ್ಹಾಣ, ಮುಂಬಯಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಎಸ್.ಜಿ. ಮೆಹೆರೆ, ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಡಿ.ಕೆ. ಜೈನ್, ರಾಜ್ಯದ ಮಾಜಿ ಅಡ್ವೊಕೇಟ್ ಜನರಲ್ ವೀರೇಂದ್ರ ಸರಾಫ್, ಸಂವಿಧಾನ ತಜ್ಞ ಪದ್ಮಶ್ರೀ ರಮೇಶ ಪತಂಗೆ, ಶಿಕ್ಷಣ ತಜ್ಞೆ ಮತ್ತು ಸಾಮಾಜಿಕ ಕಾರ್ಯಕರ್ತೆಯಾದ ಡಾ. ಸುವರ್ಣ ರಾವಲ ರವರು ಸೇರಿದ್ದಾರೆ ಎಂದು ದೇವೇಂದ್ರ ಫಡ್ನವಿಸರವರು ಈ ಸಂದರ್ಭದಲ್ಲಿ ಹೇಳಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ