ದೇವಸ್ಥಾನದ ಆಡಳಿತವು ಜಿಲ್ಲಾ ಆಡಳಿತದ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿನ ಜಿಲ್ಲಾಡಳಿತದ ಮೇಲ್ವಿಚಾರಣೆಯಲ್ಲಿರುವ ಪ್ರಸಿದ್ಧ ಮತ್ತು ಪ್ರಾಚೀನ ಬುದ್ಧೇಶ್ವರ ದೇವಸ್ಥಾನದಿಂದ ಮೇಲಿಂದ ಮೇಲೆ ಆಗುತ್ತಿದ್ದ ಗಂಟೆಯ ಕಳುವಿನ ರಹಸ್ಯ ಕೊನೆಗೂ ಬಯಲಾಗಿದ್ದು, ದೇವಸ್ಥಾನದ ಸೇವಕನೇ ಹಿತ್ತಾಳೆಯ ಬೆಲೆಬಾಳುವ ಗಂಟೆಯನ್ನು ಕದಿಯುವಾಗ ಸಾಕ್ಷ್ಯ ಸಮೇತವಾಗಿ ಸಿಕ್ಕಿಬಿದ್ದಿದ್ದಾನೆ. ಈ ಘಟನೆಯಿಂದ ಭಕ್ತರಲ್ಲಿ ಆಕ್ರೋಶದ ಅಲೆ ಎದ್ದಿದೆ. ಗೋಲು ಉರ್ಫ್ ಗೌರವ ಎಂಬಾತನೇ ಈ ಸೇವಕನಾಗಿದ್ದು, ಈತನಿಗೆ ದೇವಸ್ಥಾನದಲ್ಲಿ ಪ್ರತಿದಿನ ನಡೆಯುವ ಶೃಂಗಾರ ಆರತಿಯ ವ್ಯವಸ್ಥೆಯ ಜವಾಬ್ದಾರಿಯಿತ್ತು. ಇದರ ದುರುಪಯೋಗ ಪಡೆದು ಆತನು ಈ ಕೃತ್ಯ ಎಸಗಿದ್ದಾನೆ. ಈ ಕುರಿತು ಸ್ಥಳೀಯ ನಾಗರಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ದೇವಸ್ಥಾನದಿಂದ ಈ ಹಿಂದೆಯೂ ಹಿತ್ತಾಳೆಯ ಹಲವಾರು ಗಂಟೆಗಳು ಕಳುವಾಗಿದ್ದವು; ಆದರೆ ಈ ಘಟನೆಗಳ ಯಾವುದೇ ಸುಳಿವು ಸಿಗುತ್ತಿರಲಿಲ್ಲ. ಗೌರವನ ಬಂಧನದ ನಂತರ ಈ ಎಲ್ಲಾ ಕಳ್ಳತನಗಳ ಹಿಂದೆ ಆತನ ಕೈವಾಡವೇ ಇರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಲೆಕ್ಕಾಧಿಕಾರಿ ಆನಂದ ಶ್ರೀವಾಸ್ತವ ರವರು ಪಾರಾ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿದ್ದಾರೆ. ಬುದ್ಧೇಶ್ವರ ದೇವಸ್ಥಾನದ ಈ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ತಕ್ಷಣವೇ ಮೊಕದ್ದಮೆ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ದೇವಸ್ಥಾನದ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಬೇಕೆಂದು ಸ್ಥಳೀಯ ನಾಗರಿಕರು ಮತ್ತು ಭಕ್ತರು ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ