ಕೇಂದ್ರ ಗೃಹ ಸಚಿವಾಲಯದ ಮಾಜಿ ಉಪ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರ ಆರೋಪ
ಉಗ್ರ ಕಸಬ್ ಜೀವಂತವಾಗಿ ಸಿಕ್ಕಿಬಿದ್ದಿದ್ದರಿಂದ 'ಹಿಂದೂ ಭಯೋತ್ಪಾದನೆ'ಯ ಕಥೆ ವಿಫಲವಾಯಿತು ಎಂದು ದಾವೆ
(ಐ.ಎಸ್.ಐ ಅಂದರೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ – ಪಾಕಿಸ್ತಾನದ ಗುಪ್ತಚರ ಸಂಸ್ಥೆ)

ನವ ದೆಹಲಿ – ಮುಂಬಯಿನಲ್ಲಿ ೨೬ ನವೆಂಬರ್ ೨೦೦೮ ರಂದು ನಡೆದ, ಅಂದರೆ ೨೬/೧೧ ರ ಜಿಹಾದಿ ಉಗ್ರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯದ ಮಾಜಿ ಉಪ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರು, ಈ ದಾಳಿಯು ಕಾಂಗ್ರೆಸ್ ಮತ್ತು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ. ಇವರ ನಡುವಿನ ಒಂದು ‘ಫಿಕ್ಸ್ ಮ್ಯಾಚ್’ (ಮೊದಲೇ ನಿರ್ಧರಿಸಲಾದ ಘಟನೆ) ಆಗಿತ್ತು ಎಂದು ಆರೋಪಿಸಿದ್ದಾರೆ. ಒಂದು ವೇಳೆ ಪಾಕಿಸ್ತಾನಿ ಉಗ್ರ ಅಜ್ಮಲ್ ಕಸಬ್ ಜೀವಂತವಾಗಿ ಸಿಕ್ಕಿಬೀಳದಿದ್ದರೆ, ಈ ದಾಳಿಯ ‘ನೆರೇಟಿವ್’ ಅನ್ನು ‘ಹಿಂದೂ ಭಯೋತ್ಪಾದನೆ’ಯ ಕಡೆಗೆ ತಿರುಗಿಸುವ ಪ್ರಯತ್ನ ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.
🚨 Serious Allegations & Call for Investigation 🚨
Former MHA Under Secretary R.V.S. Mani in podcast with @smitaprakash claims the 26/11 Mumbai terror attacks were a joint plot by Congress & the ISI to manufacture a "Hindu Terror" narrative; which failed only because Kasab was… pic.twitter.com/jMesPiUtEe
— Sanatan Prabhat (@SanatanPrabhat) July 13, 2026
‘ಹಿಂದೂ ಭಯೋತ್ಪಾದನೆ’ಗೆ ಸಂಬಂಧಿಸಿದ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ!
ಮಣಿ ಅವರು, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ಮೇಲೆ ಆರೋಪ ಮಾಡುತ್ತಾ, ೨೦೦೬ ರಲ್ಲಿ ದಿಗ್ವಿಜಯ್ ಸಿಂಗ್ ಅವರು ನನ್ನ ಬಳಿ ಹಿಂದೂ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳ ಮಾಹಿತಿ ಕೇಳಿದ್ದರು; ಆದರೆ ಆ ಸಮಯದಲ್ಲಿ ಗೃಹ ಸಚಿವಾಲಯದ ದಾಖಲೆಗಳಲ್ಲಿ ಅಂತಹ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ೨೦೧೦ ರವರೆಗೆ ಸಚಿವಾಲಯದ ಅಧಿಕೃತ ದಾಖಲೆಗಳಲ್ಲಿ ‘ಹಿಂದೂ ಭಯೋತ್ಪಾದನೆ’ ಎಂಬ ಯಾವುದೇ ಪದವೇ ಅಸ್ತಿತ್ವದಲ್ಲಿರಲಿಲ್ಲ ಎಂದು ಹೇಳಿದ್ದಾರೆ.
ಇದನ್ನು ವೀಕ್ಷಿಸಿ –Hindu Terror Origin, 26/11 Attacks, Ishrat Jahan Case, Malegaon Blast, Beant Singh| RVS Mani |EP-431(ಸೌಜನ್ಯ – ANI News) |
ಇಶರತ್ ಜಹಾನ್ ಪ್ರಕರಣದಲ್ಲಿ ಮೋದಿ ಮತ್ತು ಶಾ ಅವರನ್ನು ಗುರಿ ಮಾಡಲು ಪ್ರಯತ್ನಿಸಲಾಗಿತ್ತು!
ಮಣಿ ಅವರು ಉಗ್ರಗಾಮಿ ಇಶರತ್ ಜಹಾನ್ ಪ್ರಕರಣವನ್ನು ಉಲ್ಲೇಖಿಸುತ್ತಾ, ಆ ಘಟನೆಯಲ್ಲಿ ಗುಜರಾತ್ನ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಅಂದಿನ ರಾಜ್ಯ ಗೃಹ ಸಚಿವ ಅಮಿತ್ ಶಾ ಅವರನ್ನು ಗುರಿ ಮಾಡಲು ಪ್ರಯತ್ನಿಸಲಾಗಿತ್ತು ಎಂದು ದಾವೆ ಮಾಡಿದ್ದಾರೆ.
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ
೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಗ್ರಾಹಕನಿಗೆ 40 ಸಾವಿರ ರೂಪಾಯಿ ಪರಿಹಾರ ನೀಡಿ! – ‘ಗ್ರಾಹಕ ವಿವಾದಗಳ ಪರಿಹಾರ ಆಯೋಗ’ದಿಂದ ಅಂಚೆ ಕಚೇರಿಗೆ ಆದೇಶ : Postal Parcel Stolen
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border