(ದರ್ಗಾ ಎಂದರೆ ಮುಸ್ಲಿಮರ ಸಿದ್ಧಪುರುಷರ ಸಮಾಧಿ ಸ್ಥಳ)

ಜೈಪುರ (ರಾಜಸ್ಥಾನ) – ಭಾರತ-ಪಾಕಿಸ್ತಾನ ಗಡಿಯ 50 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ವಿವಿಧ ಮಸೀದಿಗಳು, ಮದರಸಾಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಾಲಯವು,
1. ಈ ಕ್ರಮಕ್ಕೆ ಧಾರ್ಮಿಕ ಬಣ್ಣ ಬಳಿಯುವ ಪ್ರಯತ್ನವು ಸಂಪೂರ್ಣವಾಗಿ ತಪ್ಪು ಮತ್ತು ಯಾವುದೇ ವಾಸ್ತವಿಕ ಆಧಾರವನ್ನು ಹೊಂದಿಲ್ಲ.
2. ಎಲ್ಲೆಲ್ಲಿ ಅಕ್ರಮ ನಿರ್ಮಾಣಗಳಿವೆಯೋ, ಅಲ್ಲಿ ಯಾವುದೇ ನಿರ್ದಿಷ್ಟ ಸಮುದಾಯವನ್ನು ಉಲ್ಲೇಖಿಸದೆ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಆದ್ದರಿಂದ, ಪ್ರಸ್ತುತ ವಿಷಯವು ರಾಷ್ಟ್ರೀಯ ಭದ್ರತೆ ಮತ್ತು ನಿಯಮಾವಳಿಗಳ ಅನುಸರಣೆಗೆ ಸಂಬಂಧಿಸಿದ್ದಾಗಿದೆ ಹೊರತು ಧಾರ್ಮಿಕ ತಾರತಮ್ಯದ್ದಲ್ಲ ಎಂಬುದನ್ನು ಸ್ಪಷ್ಟಪಡಿಸುವುದು ಅಗತ್ಯವಾಗಿದೆ.
3. ಈ ನಿರ್ಮಾಣಗಳು ಮೇಲ್ನೋಟಕ್ಕೆ ಅನಧಿಕೃತವಾಗಿದ್ದವು; ಏಕೆಂದರೆ ಅವುಗಳ ನಿರ್ಮಾಣಕ್ಕಾಗಿ ‘ರಾಜಸ್ಥಾನ ಧಾರ್ಮಿಕ ಕಟ್ಟಡಗಳು ಮತ್ತು ಸ್ಥಳಗಳ ಕಾಯ್ದೆ’ಯ ನಿಬಂಧನೆಗಳ ಅಡಿಯಲ್ಲಿ ಯಾವುದೇ ಅನುಮತಿಯನ್ನು ಪಡೆದುಕೊಂಡಿರಲಿಲ್ಲ.
4. ಈ ಪ್ರಕರಣದಲ್ಲಿ ಮಾಲೀಕತ್ವದ ಹಕ್ಕು, ಒಡೆತನ, ನಿಯಂತ್ರಣ ಮತ್ತು ಭೂಮಿಯ ಬಳಕೆಗೆ ಸಂಬಂಧಿಸಿದ ವಿಷಯಗಳು ವಿವಾದಾತ್ಮಕವಾಗಿವೆ.
5. ಅರ್ಜಿದಾರರಿಗೆ ಕಾರಣ ಕೇಳುವ ನೋಟಿಸ್ಗಳನ್ನು ಜಾರಿಗೊಳಿಸಲಾಗಿದ್ದರೂ, ಅವರು ಈ ಪ್ರಕ್ರಿಯೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದರು. ಆದ್ದರಿಂದ, ಶಾಸನಬದ್ಧ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿಫಲರಾದ ನಂತರ, ಈಗ ನೈಸರ್ಗಿಕ ನ್ಯಾಯದ ಉಲ್ಲಂಘನೆಯ ನೆಪದಲ್ಲಿ ನ್ಯಾಯವ್ಯಾಪ್ತಿಯನ್ನು ಬಳಸಲು ಅವರಿಗೆ ಅನುಮತಿ ನೀಡಲು ಸಾಧ್ಯವಿಲ್ಲ.
6. ದೇಶದ ಭದ್ರತೆ ಅಪಾಯದಲ್ಲಿದ್ದಾಗ, ರಕ್ಷಣೆಯ ದೃಷ್ಟಿಯಿಂದ ಕೈಗೊಳ್ಳಲಾಗುವ ಕಠಿಣ ಕ್ರಮಗಳನ್ನು ಒಪ್ಪಿಕೊಳ್ಳಬೇಕು ಎಂಬುದು ಪ್ರತಿಯೊಬ್ಬ ನಾಗರಿಕನಿಗೂ ತಿಳಿದಿರುವ ವಿಷಯವಾಗಿದೆ. ಈ ಆಸ್ತಿಗಳು ಅಂತರರಾಷ್ಟ್ರೀಯ ಗಡಿಯ ಸಮೀಪದಲ್ಲಿರುವುದರಿಂದ ಈ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ
೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಗ್ರಾಹಕನಿಗೆ 40 ಸಾವಿರ ರೂಪಾಯಿ ಪರಿಹಾರ ನೀಡಿ! – ‘ಗ್ರಾಹಕ ವಿವಾದಗಳ ಪರಿಹಾರ ಆಯೋಗ’ದಿಂದ ಅಂಚೆ ಕಚೇರಿಗೆ ಆದೇಶ : Postal Parcel Stolen
ಜಮ್ಮು ನ್ಯಾಯಾಲಯದಿಂದ ಪೊಲೀಸರಿಗೆ ದಾಖಲೆಗಳನ್ನು ಸಲ್ಲಿಸಲು ಆದೇಶ! : Vaishno Devi Fake Silver
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ