ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest

ರಾಜೇಂದ್ರ ಚೌಹಾಣ್ ಬಂಧನ

ಬದರಿನಾಥ (ಉತ್ತರಖಂಡ ) – ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಅಧಿಕಾರಿಯನ್ನು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಬಂಧಿಸಿದ್ದಾರೆ. ಮಾಜಿ ಅಧಿಕಾರಿ ರಾಜೇಂದ್ರ ಚೌಹಾಣ್ ಅವರು ಜೂನ್ 30 ರಂದು ನಿವೃತ್ತರಾಗಿದ್ದರು. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇತರ ಕೆಲವು ವ್ಯಕ್ತಿಗಳ ಚಲನವಲನಗಳೂ ಕೂಡ ಶಂಕಾಸ್ಪದವಾಗಿ ಕಂಡುಬಂದಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ.