ಮಕ್ಕಳಿಗೆ ಪೌಷ್ಟಿಕ ಆಹಾರದ ಅಭ್ಯಾಸವನ್ನು ಬೆಳೆಸಲು ರಾಜ್ಯ ಸರಕಾರದ ತೀರ್ಮಾನ

ಮಂಗಳೂರು – ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರದ ಅಭ್ಯಾಸವನ್ನು ಬೆಳೆಸಲು ಶಾಲೆಗಳ ಹತ್ತಿರ ಪಿಜ್ಜಾ ಮತ್ತು ಬರ್ಗರ್ ಮಾರಾಟದ ಮೇಲೆ ಶೀಘ್ರದಲ್ಲೇ ನಿಷೇಧ ಹೇರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಇಲ್ಲಿ ಘೋಷಿಸಿದರು.
🚫🍔 Big Move in Karnataka! 🍕❌
The Karnataka government is set to ban the sale of pizzas and burgers near schools to encourage healthier eating habits among children.
If a Congress-led government can take this bold step for children's health, why aren't other states following… pic.twitter.com/ujm7conjJ5
— Sanatan Prabhat (@SanatanPrabhat) July 19, 2026
ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು, ವಿದ್ಯಾರ್ಥಿಗಳಿಗೆ ಬರುವ ಅನೇಕ ಕಾಯಿಲೆಗಳ ಹಿಂದಿನ ನಿಜವಾದ ಕಾರಣ ‘ಜಂಕ್ ಫುಡ್’ (ಸಂಸ್ಕರಿಸಿದ ಮತ್ತು ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾದ ಆಹಾರ ಪದಾರ್ಥಗಳು) ಸೇವನೆಯಾಗಿದೆ. ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಅತ್ಯಗತ್ಯವಾಗಿದ್ದು, ಶಾಲಾ ಮಟ್ಟದಲ್ಲಿ ಇಂತಹ ಪದಾರ್ಥಗಳ ಮೇಲೆ ನಿರ್ಬಂಧ ಹೇರಿದರೆ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಆರೋಗ್ಯಕರ ಅಭ್ಯಾಸಗಳು ಬೆಳೆಯುತ್ತವೆ. ಸರಕಾರವು ಆಹಾರ ಸುರಕ್ಷತೆಯ ನಿಯಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿಸುವುದರ ಜೊತೆಗೆ ಆಹಾರ ತಪಾಸಣಾ ಪ್ರಯೋಗಾಲಯಗಳನ್ನು ಹೆಚ್ಚು ಸಕ್ಷಮಗೊಳಿಸಲಿದೆ. ಕಲಬೆರಕೆ ಮತ್ತು ಕಳಪೆ ಆಹಾರ ಪದಾರ್ಥಗಳನ್ನು ನಿಯಂತ್ರಿಸಲು ಪ್ರಸ್ತುತ ಇರುವ ಪ್ರಯೋಗಾಲಯಗಳ ಆಧುನೀಕರಣ ಹಾಗೂ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳನ್ನು ಸ್ಥಾಪಿಸುವ ಕೆಲಸವನ್ನೂ ಕೈಗೆತ್ತಿಕೊಳ್ಳಲಾಗಿದೆ. ‘ಜಂಕ್ ಫುಡ್’ ಮೇಲಿನ ನಿಷೇಧದ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಖಾದರ್ ಅವರು ಸ್ಪಷ್ಟಪಡಿಸಿದರು.
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News