ಇಮ್ರಾನ್ ಖಾನ್ ಅವರ ಸಹೋದರಿ ನೊರೀನ್ ನಿಯಾಜಿ ಅವರ ಹೇಳಿಕೆ
ನೊರೀನ್ ಅವರಿಗೆ ತನಿಖಾ ಸಂಸ್ಥೆಯಿಂದ ವಿಚಾರಣೆಗೆ ಕರೆ!

ಇಸ್ಲಾಮಾಬಾದ್ (ಪಾಕಿಸ್ತಾನ) – ಮೇ 2025 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸಂಘರ್ಷವು (ಆಪರೇಷನ್ ಸಿಂದೂರ್), ಪಾಕಿಸ್ತಾನದ ಸೇನಾ ನಾಯಕತ್ವದ ಅಸಿಮ್ ಮುನೀರ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಒಳಸಂಚಿನ ಫಲಿತಾಂಶವಾಗಿತ್ತು. ಪಾಕಿಸ್ತಾನಿ ಸೇನೆಯ ವರ್ಚಸ್ಸನ್ನು ಸುಧಾರಿಸುವುದೇ ಇದರ ಹಿಂದಿನ ಮುಖ್ಯ ಉದ್ದೇಶವಾಗಿತ್ತು. ನಿಮಗೆ ಏನೆನಿಸುತ್ತದೆ? ಭಾರತದಂತಹ ದೊಡ್ಡ ದೇಶವು ಮೇ 10 ರಂದು ಪಾಕಿಸ್ತಾನ ನಡೆಸಿದ ಆಕ್ರಮಣಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಸ್ಥಿತಿಯಲ್ಲಿ ಇರಲಿಲ್ಲವೇ? ಅದು ಪ್ರತ್ಯುತ್ತರ ನೀಡಬಹುದಿತ್ತು; ಆದರೆ ಪರಸ್ಪರ ತಿಳುವಳಿಕೆಯಿಂದಾಗಿ ಭಾರತವು ಉದ್ದೇಶಪೂರ್ವಕವಾಗಿ ಯಾವುದೇ ಕಠಿಣ ಕ್ರಮ ಕೈಗೊಳ್ಳಲಿಲ್ಲ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ನೊರೀನ್ ನಿಯಾಜಿ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ, ಪಾಕಿಸ್ತಾನದ ಸೈಬರ್ ಅಪರಾಧ ತನಿಖಾ ಸಂಸ್ಥೆಯು ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಇಲ್ಲಿನ ಕಚೇರಿಗೆ ಹಾಜರಾಗುವಂತೆ ತಿಳಿಸಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಸೇನೆಯ ಅಪಕೀರ್ತಿ ಮಾಡುವುದರ ಜೊತೆಗೆ ಸುಳ್ಳು, ಆಕ್ಷೇಪಾರ್ಹ ಮತ್ತು ಪ್ರಚೋದನಾಕಾರಿ ಮಾಹಿತಿಯನ್ನು ಹರಡಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.
1. ನೊರೀನ್ ನಿಯಾಜಿ ಅವರು ಸಂದರ್ಶನವೊಂದರಲ್ಲಿ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ 4 ದಿನಗಳ ಕಾಲ ನಡೆದ ಸಂಘರ್ಷದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ಸೇನಾ ಕ್ರಮವನ್ನು ಹಗುರವಾಗಿ ಪರಿಗಣಿಸಿದರು. ಹಾಗೆಯೇ ಭಾರತವು ಈ ಸಂಘರ್ಷವನ್ನು ಮತ್ತಷ್ಟು ಮುಂದುವರಿಸಲಿಲ್ಲ; ಏಕೆಂದರೆ ಪಾಕಿಸ್ತಾನವು ಇಸ್ರೇಲ್ ಅನ್ನು ಮಾನ್ಯತೆ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿತ್ತು. ಈ ಸಂಪೂರ್ಣ ವಿದ್ಯಮಾನಗಳ ಉದ್ದೇಶವು ಪಾಕಿಸ್ತಾನಕ್ಕೆ ‘ಅಬ್ರಹಾಂ ಒಪ್ಪಂದ’ಕ್ಕೆ ಸೇರ್ಪಡೆಯಾಗಲು ದಾರಿ ಸುಗಮಗೊಳಿಸುವುದಾಗಿತ್ತು ಎಂದೂ ಅವರು ಹೇಳಿದರು.
2. ಪಾಕಿಸ್ತಾನವು ಇಸ್ರೇಲ್ ಅನ್ನು ಒಂದು ದೇಶವೆಂದು ಮಾನ್ಯ ಮಾಡದ ಮತ್ತು ಇಸ್ರೇಲ್ನೊಂದಿಗೆ ಯಾವುದೇ ರಾಜತಾಂತ್ರಿಕ ಸಂಬಂಧಗಳನ್ನು ಹೊಂದಿರದ ದೇಶಗಳಲ್ಲಿ ಒಂದಾಗಿದೆ. ಮತ್ತೊಂದೆಡೆ, ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಅಬ್ರಹಾಂ ಒಪ್ಪಂದದ ಅಡಿಯಲ್ಲಿ ಇಸ್ರೇಲ್, ಸಂಯುಕ್ತ ಅರಬ್ ಎಮಿರೇಟ್ಸ್ (ಯುಎಇ), ಬಹ್ರೇನ್, ಸುಡಾನ್, ಮೊರಾಕೊ ಸೇರಿದಂತೆ ಹಲವು ಅರಬ್ ದೇಶಗಳ ನಡುವೆ ರಾಜತಾಂತ್ರಿಕ, ಆರ್ಥಿಕ ಮತ್ತು ಭದ್ರತಾ ಸಂಬಂಧಗಳು ಸ್ಥಾಪನೆಯಾಗಿವೆ.
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ