
ನವದೆಹಲಿ – ಜಂತರ್ ಮಂತರ್ನಲ್ಲಿ ಕಳೆದ ೨೩ ದಿನಗಳಿಂದ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ನ ಮೂರು ಕಾರ್ಯಕರ್ತರು ೨೩ ದಿನಗಳ ನಂತರ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದಿದ್ದಾರೆ. ವಿರೋಧ ಪಕ್ಷಗಳ ಸಂಸದರು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಕ್ಷೇತ್ರದ ಗಣ್ಯರ ನಿಯೋಗವೊಂದು ಉಪವಾಸ ಹಿಂಪಡೆಯುವಂತೆ ಮನವಿ ಮಾಡಿದ ನಂತರ ಅವರು ಈ ನಿರ್ಧಾರ ತೆಗೆದುಕೊಂಡರು. ನೇಹಾ, ಮನೀಷ್ ಮತ್ತು ಆಮೀನ್ ಎಂಬ ಮೂವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು. “ವಿದ್ಯಾರ್ಥಿಗಳ ಬೇಡಿಕೆಗಳನ್ನು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಹಾಗೂ ರಾಜಕೀಯ ಮತ್ತು ಜನಾಂದೋಲನದ ಮೂಲಕ ಹೋರಾಟ ಮುಂದುವರಿಸಲಾಗುವುದು,” ಎಂದು ನಿಯೋಗವು ಭರವಸೆ ನೀಡಿತು.
ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಈಗ ಸಂಸತ್ತಿನ ಮುಂಗಾರು ಅಧಿವೇಶನದ ಸಮಯದಲ್ಲಿ ದೇಶಾದ್ಯಂತ ತಿಂಗಳ ಕಾಲ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ‘ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦’ ರ ವಿರುದ್ಧ ಈ ಅಭಿಯಾನವನ್ನು ನಡೆಸಲಾಗುವುದು. ಇದರ ಜೊತೆಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಹೊಣೆಗಾರಿಕೆಯನ್ನು ನಿಗದಿಪಡಿಸಬೇಕೆಂಬ ಬೇಡಿಕೆಯನ್ನು ಸಹ ಮುಂದುವರಿಸಲಾಗುವುದು ಎಂದು ಅಸೋಸಿಯೇಷನ್ ಸ್ಪಷ್ಟಪಡಿಸಿದೆ.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ
ಮೂರು ಷರತ್ತುಗಳನ್ನು ಒಪ್ಪಿದರೆ ಉಪವಾಸ ಸತ್ಯಾಗ್ರಹ ಅಂತ್ಯ ! – ಸೋನಮ್ ವಾಂಗ್ಚುಕ್