'ಕಾಕ್ರೋಚ್ ಜನತಾ ಪಕ್ಷ’ದ ಹಿಂಸಾತ್ಮಕ ಮೆರವಣಿಗೆಯ ಮೇಲಿನ ಕ್ರಮದ ವಿರುದ್ಧ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ

ನವದೆಹಲಿ – ‘ಕಾಕ್ರೋಚ್ ಜನತಾ ಪಕ್ಷ’ವು ಜುಲೈ 20 ರಂದು ಜಂತರ್ ಮಂತರ್ನಿಂದ ಸಂಸತ್ತಿನ ಕಡೆಗೆ ಮೆರವಣಿಗೆಯನ್ನು ಹಮ್ಮಿಕೊಂಡಿತ್ತು. ಆ ಸಮಯದಲ್ಲಿ ಹಿಂಸಾಚಾರ ನಡೆದಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅಶ್ರುವಾಯು ಸಿಡಿಸಿ ಮೆರವಣಿಗೆಯನ್ನು ಸಂಸತ್ತಿನಿಂದ 100 ಮೀಟರ್ ದೂರದಲ್ಲಿ ತಡೆದರು. ಈ ಹಿಂಸಾಚಾರದಲ್ಲಿ 115 ಕ್ಕೂ ಹೆಚ್ಚು ಪೊಲೀಸರು ಮತ್ತು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಈ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಆದರೆ ಇದರ ತುರ್ತು ವಿಚಾರಣೆಗೆ ನ್ಯಾಯಾಲಯವು ನಿರಾಕರಿಸಿದೆ. ‘ಈ ಎಲ್ಲ ವಿಚಾರಗಳಲ್ಲಿ ನ್ಯಾಯಾಲಯವನ್ನು ಎಳೆಯಬೇಡಿ. ನಾಳೆ ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು’, ಎಂದು ಹೇಳುವ ಮೂಲಕ ನ್ಯಾಯಾಲಯವು ತಕ್ಷಣದ ವಿಚಾರಣೆಯ ಬೇಡಿಕೆಯನ್ನು ತಿರಸ್ಕರಿಸಿದೆ.
ಪೊಲೀಸರಿಂದ 5 ಪ್ರಕರಣಗಳು ದಾಖಲು
ಈ ಹಿಂಸಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 5 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಕನ್ನಾಟ್ ಪ್ಲೇಸ್, ಪಾರ್ಲಿಮೆಂಟ್ ಸ್ಟ್ರೀಟ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂಸಾಚಾರ, ಕಲ್ಲು ತೂರಾಟ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಿಸಿಟಿವಿ ಮತ್ತು ವಿಡಿಯೋಗಳ ಮೂಲಕ ಆರೋಪಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ