ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆ : Karnataka HC Stays Case

ಸರಕಾರದ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆಂಬ ನೆಪವೊಡ್ಡಿ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಪ್ರಕರಣ ದಾಖಲಿಸಿದ್ದ ಕಾಂಗ್ರೆಸ್ ಸರಕಾರ

ಬೆಂಗಳೂರು – ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ, ಈ ಕೊಲೆಯನ್ನು ವಿರೋಧಿಸಿ ಟ್ವೀಟ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ. ಇಂತಹ ಟ್ವೀಟ್ ಮಾಡಿದವರ ಹಿಂದೆ ಬೀಳುವ ರಾಜ್ಯ ಸರಕಾರವು ಅರಾಜಕತೆಯನ್ನು ಸೃಷ್ಟಿಸುತ್ತಿದೆ, ಎಂದು ಉಚ್ಚ ನ್ಯಾಯಾಲಯ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಾ, ಟ್ವೀಟ್ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡಿದೆ. ಬಂಟ್ವಾಳದಲ್ಲಿ ಲಾವಣ್ಯ ಎಂಬ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ವಿದ್ಯಾರ್ಥಿ ಕಿರಣ ಆರಾಧ್ಯ ಅವರು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದರು. ಆ ಪೋಸ್ಟ್ ಸರಕಾರದ ವರ್ಚಸ್ಸಿಗೆ ಧಕ್ಕೆ ತರುತ್ತಿದೆ ಎಂದು ಹೇಳಿ ಪೊಲೀಸರು ಕಿರಣ ಆರಾಧ್ಯ ಅವರ ವಿರುದ್ಧ ಹೈಗ್ರೌಂಡ್ಸ್ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ಅದನ್ನು ರದ್ದುಗೊಳಿಸಲು ಕಿರಣ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ತಡೆಯಾಜ್ಞೆ ನೀಡಿದೆ.

ಕಿರಣ ಆರಾಧ್ಯ ಅವರು ತಮ್ಮ ಎಕ್ಸ್ ಪೋಸ್ಟ್‌ ನಲ್ಲಿ ಎಡಗೈಯಲ್ಲಿ ಗಡಿಯಾರ ಮತ್ತು ಪಾದದ ಹಿಮ್ಮಡಿಗಿಂತ ಮೇಲಕ್ಕೆ ಪ್ಯಾಂಟ್ ಧರಿಸಿದ್ದ ವ್ಯಕ್ತಿಯನ್ನು ತೋರಿಸುತ್ತಾ ‘ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಕೊಲೆ ಮಾಡಿದ ರಾಕ್ಷಸ’ ಎಂದು ಬರೆದಿದ್ದರು.

ಸಂಪಾದಕೀಯ ನಿಲುವು

ಒಂದೆಡೆ ‘ಕೇಂದ್ರ ಸರಕಾರವು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸುತ್ತಿದೆ’ ಎಂದು ಕಿರುಚಾಡುವ ಕಾಂಗ್ರೆಸ್, ತನ್ನದೇ ಆಡಳಿತವಿರುವ ರಾಜ್ಯದಲ್ಲಿ ಏನು ಮಾಡುತ್ತಿದೆ?