ಜಂತರ್ ಮಂತರ್ನಲ್ಲಿ ಹಿಂಸಾತ್ಮಕ ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್ ವಿರುದ್ಧದ ಅರ್ಜಿಯ ವಿಚಾರಣೆ ವೇಳೆ ಸರ್ವೋಚ್ಛ ನ್ಯಾಯಾಲಯದಿಂದ ವಕೀಲರಿಗೆ ತರಾಟೆ

ನವದೆಹಲಿ – ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ ಮತ್ತು ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ. ನಮಗೆ ಲಾಠಿಚಾರ್ಜ್ನ ವೀಡಿಯೊಗಳಲ್ಲಿ ಯಾವುದೇ ಆಸಕ್ತಿಯಿಲ್ಲ. ನಮ್ಮ ಬಳಿ ಈ ವೀಡಿಯೊಗಳನ್ನು ನೋಡುತ್ತಾ ಕುಳಿತುಕೊಳ್ಳಲು ಸಮಯವೇ ಇಲ್ಲ ಎಂದು ಜಂತರ್ ಮಂತರ್ನಲ್ಲಿ ಹಿಂಸಾಚಾರ ನಡೆಸಿದ ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರ ಮೇಲಿನ ಲಾಠಿಚಾರ್ಜ್ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸರ್ವೋಚ್ಛ ನ್ಯಾಯಾಲಯವು ಅರ್ಜಿದಾರರ ವಕೀಲರಿಗೆ ತರಾಟೆಗೆ ತೆಗೆದುಕೊಂಡಿತು.
After the Delhi High Court refused an urgent hearing on the plea against police action during the CJP protest, the Supreme Court has now also declined an urgent hearing.
CJI Surya Kant remarked, "We don't have time to watch videos."
Yet, petitions are filed against police… https://t.co/PsgQ36KieL pic.twitter.com/h40hOes5Kv
— Sanatan Prabhat (@SanatanPrabhat) July 22, 2026
ಅರ್ಜಿದಾರರ ವಕೀಲರು ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಾ, ‘ವಿದ್ಯಾರ್ಥಿಗಳು ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ) ಪರೀಕ್ಷೆ, ‘ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ’ಯಲ್ಲಿನ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ) ಸುಧಾರಣೆಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅತ್ಯಂತ ಪ್ರಮುಖ ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಕುರಿತು ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಹೇಳಿದರು. ಈ ವೇಳೆ ವಕೀಲರ ಮಾತನ್ನು ಮಧ್ಯದಲ್ಲೇ ತಡೆದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ‘ತುಂಬಾ ತುಂಬಾ ಧನ್ಯವಾದಗಳು!’ ಎಂದರು. ತದನಂತರ ವಕೀಲರು ನ್ಯಾಯಾಲಯದಲ್ಲಿ ಪೋಲಿಸರ ದೌರ್ಜನ್ಯ ಮತ್ತು ಲಾಠಿಚಾರ್ಜ್ನ ವೀಡಿಯೊಗಳು ಲಭ್ಯವಿವೆ ಎಂದು ಹೇಳಲು ಪ್ರಯತ್ನಿಸಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು ವೀಡಿಯೊ ನೋಡಲು ಸಮಯವಿಲ್ಲ ಎಂದು ಹೇಳಿದರು.
ಈ ಹಿಂದೆಯೂ ದೆಹಲಿ ಹೈಕೋರ್ಟ್ ಸಹ ಈ ಪೊಲೀಸ್ ಕ್ರಮದ ವಿರುದ್ಧದ ಇಂತಹುದೇ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿತ್ತು. ‘ಈ ಇಡೀ ವಿಷಯದಲ್ಲಿ ನ್ಯಾಯಾಲಯವನ್ನು ಸುಮ್ಮನೆ ಎಳೆದು ತರಬೇಡಿ’ ಎಂದು ಹೈಕೋರ್ಟ್ ಹೇಳಿತ್ತು.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
ಠಾಕೂರಬುವಾ ಸಮಾಧಿಯಲ್ಲಿ ಭಕ್ತಿಭಾವದ ಮಾವುಲಿ ರಿಂಗಣ : Mauli Palkhi Ringan