ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ

  • ಪ್ರಶ್ತ್ರಿಪತ್ರಿಕೆ ಸೋರಿಕೆಯ ಬಗ್ಗೆ ಮಧ್ಯರಾತ್ರಿ ವಿದ್ಯಾರ್ಥಿಗಳಿಗೆ ವಿಡಿಯೋ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ

  • ವಿಶೇಷ ತ್ವರಿತಗತಿ ನ್ಯಾಯಾಲಯದ ಸ್ಥಾಪನೆ

ನವ ದೆಹಲಿ – ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ಪ್ರಶ್ತ್ರಿಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರಕಾರವು ಉನ್ನತ ಶಿಕ್ಷಣ ಸಚಿವರನ್ನು ತಕ್ಷಣವೇ ಸ್ಥಳಾಂತರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ವಿದ್ಯಾರ್ಥಿಗಳಿಗೆ ವಿಡಿಯೋ ಸಂದೇಶ ಪ್ರಸಾರ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಕೇಂದ್ರ ಸರಕಾರವು ಆಡಳಿತಾತ್ಮಕ ಹೆಜ್ಜೆಗಳೊಂದಿಗೆ ನ್ಯಾಯಾಂಗ ಮತ್ತು ಕಾನೂನು ಮಟ್ಟದಲ್ಲಿ ಪ್ರಮುಖ ಹೆಜ್ಜೆಗಳನ್ನು ಇರಿಸಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಕೇಂದ್ರ ಸರಕಾರದ ಈ ನಿರ್ಧಾರದಿಂದ ಪ್ರಶ್ತ್ರಿಪತ್ರಿಕೆ ಸೋರಿಕೆಯ ಕಾರಣ ದೆಹಲಿಯಲ್ಲಿ ಉಂಟಾಗಿರುವ ವಿದ್ಯಾರ್ಥಿಗಳ ಪ್ರತಿಭಟನೆ ಶಮನಗೊಳ್ಳುವ ಸಾಧ್ಯತೆಯಿದೆ.

ಪ್ರಧಾನಿ ಮೋದಿಯವರು ಮಾತು ಮುಂದುವರಿಯುತ್ತಾ,

೧. ಶಿಕ್ಷಣ ಸಚಿವಾಲಯದಲ್ಲಿ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಪ್ರಶ್ತ್ರಿಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ದೆಹಲಿಯಲ್ಲಿ ವಿಶೇಷ ತ್ವರಿತಗತಿ ನ್ಯಾಯಾಲಯವನ್ನು ಆರಂಭಿಸಲಾಗಿದೆ. ಇದರೊಂದಿಗೆ ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ಸುರಕ್ಷಿತ, ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗಿಸಲು ಕಠಿಣ ಶಿಕ್ಷೆ, ತ್ವರಿತ ನ್ಯಾಯಾಲಯಗಳು ಹಾಗೂ ಪರಿಣಾಮಕಾರಿ ಕಾನೂನು ಅವಕಾಶಗಳನ್ನು ಒಳಗೊಂಡ ಮಸೂದೆಯನ್ನು ಅಧಿವೇಶನದ ಎರಡನೇ ವಾರದಲ್ಲಿ ಸಂಸತ್ತಿನಲ್ಲಿ ಮಂಡಿಸಲಾಗುವುದು. ಅದಕ್ಕೂ ಮುನ್ನ ಅದನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುತ್ತದೆ.

೨. ಪ್ರಶ್ತ್ರಿಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ದೊಡ್ಡ ನಷ್ಟವಾಗುತ್ತದೆ. ಆದ್ದರಿಂದ ಕಳೆದ ಕೆಲವು ತಿಂಗಳುಗಳಲ್ಲಿ ಅನೇಕ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

೩. ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ವ್ಯರ್ಥವಾಗಬಾರದು ಎಂಬ ಕಾರಣಕ್ಕಾಗಿ ಅಲ್ಪಾವಧಿಯಲ್ಲಿ 22 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಜುಲೈ 19 ರಂದು ಫಲಿತಾಂಶ ಘೋಷಿಸಲಾಗಿದೆ.

ಅನೇಕ ಅಧಿಕಾರಿಗಳ ಸ್ಥಳಾಂತರ

ಶಿಕ್ಷಣ ಸಚಿವಾಲಯದಲ್ಲಿನ ಬದಲಾವಣೆಗಳಲ್ಲಿ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರ ಬದಲಿಗೆ ನರೇಶ್ ಪಾಲ್ ಗಂಗವಾರ್ ಅವರಿಗೆ ಉನ್ನತ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಇದರೊಂದಿಗೆ ಟಿ.ಕೆ. ಅನಿಲ್ ಕುಮಾರ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಕಟಿಕಿಥಲ ಶ್ರೀನಿವಾಸ್ ಅವರನ್ನು ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಗಣಿ ಸಚಿವಾಲಯದ ಕಾರ್ಯದರ್ಶಿ ಪಿಯೂಷ್ ಗೋಯಲ್ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಎಲ್ಲ ನೇಮಕಾತಿಗಳಿಗೆ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ.

ಅನು ಗ್ರೋವರ್ ಬಾಲಿಗಾ ವಿಶೇಷ ನ್ಯಾಯಾಧೀಶರಾಗಿ ನೇಮಕ

ಪ್ರಶ್ತ್ರಿಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ಅನು ಗ್ರೋವರ್ ಬಾಳಿಗಾ ಅವರನ್ನು ವಿಶೇಷ ನ್ಯಾಯಾಧೀಶರಾಗಿ ನೇಮಿಸಿದೆ. ರಾಸ್ ಅವೆನ್ಯೂ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಥಾಪಿಸಲಾಗಿರುವ ವಿಶೇಷ ತ್ವರಿತಗತಿ ನ್ಯಾಯಾಲಯದಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ಮಾರ್ಗಗಳ ತಡೆಗಟ್ಟುವಿಕೆ) ಕಾಯ್ದೆ, 2024 ರ ಅಡಿಯಲ್ಲಿ ದಾಖಲಾಗುವ ಪ್ರಕರಣಗಳು ಹಾಗೂ ಸಂಬಂಧಿತ ಕ್ರಮಿನಲ್ ಮೊಕದ್ದಮೆಗಳ ವಿಚಾರಣೆ ನಡೆಯಲಿದೆ.