‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆಯ ಮುಖ್ಯ ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸುವಾಗ ನ್ಯಾಯಾಲಯದಿಂದ ತರಾಟೆ !

ನವ ದೆಹಲಿ – ನಿಮ್ಮ ನಿಂದನೀಯ ಮತ್ತು ಅಕ್ರಮ ಕೃತ್ಯಗಳಿಂದಾಗಿ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ನಂಬಿಕೆದ್ರೋಹವಾಗಿದೆ. ರಾತ್ರಿ-ಹಗಲು ಶ್ರಮಿಸಿ, ಹಾಗೆಯೇ ಪ್ರಾಮಾಣಿಕವಾಗಿ ಅಭ್ಯಾಸ ಮಾಡಿ ಈ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ನೀವು ದುರಾಸೆ ಮತ್ತು ಅಕ್ರಮ ಸಂಪತ್ತಿಗಾಗಿ ಸಂಪೂರ್ಣ ಪರೀಕ್ಷೆಯನ್ನೇ ಹಾಳುಮಾಡಿದಿರಿ. ನಿಮ್ಮಿಂದಾಗಿ ಕೋಟ್ಯಂತರ ರೂಪಾಯಿ ನಷ್ಟವಾಗಿದ್ದಷ್ಟೇ ಅಲ್ಲದೆ, ದೇಶದ ಅಪಕೀರ್ತಿಯೂ ಆಯಿತು. ಪ್ರಶ್ನೆಪತ್ರಿಕೆ ಸೋರಿಕೆಯ ಗುಂಪಿನ ಇವರೆಲ್ಲರೂ ಸಕ್ರಿಯ ಸದಸ್ಯರಾಗಿದ್ದರು, ಎಂದು ತರಾಟೆಗೆ ತೆಗೆದುಕೊಳ್ಳುತ್ತಾ ದೆಹಲಿಯ ವಿಶೇಷ ನ್ಯಾಯಾಲಯವು ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಮುಖ ಆರೋಪಿ ಡಾ. ಮನೋಜ ಶಿರೂರೆ ಅವನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲದೆ ಈ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ೧೩ ಆರೋಪಿಗಳ ನ್ಯಾಯಾಂಗ ಬಂಧನವನ್ನು ಆಗಸ್ಟ್ ೬ ರವರೆಗೆ ವಿಸ್ತರಿಸಿದೆ.
ಡಾ. ಶಿರೂರೆ ಒಬ್ಬ ವಿದ್ಯಾರ್ಥಿಯಿಂದ ೫ ಲಕ್ಷ ರೂಪಾಯಿ ತೆಗೆದುಕೊಂಡು ಏಪ್ರಿಲ್ ತಿಂಗಳಲ್ಲಿ ಸೋರಿಕೆಯಾಗಿದ್ದ ರಸಾಯನಶಾಸ್ತ್ರದ ಪ್ರಶ್ನೆಪತ್ರಿಕೆಯನ್ನು ತನ್ನ ಆಸ್ಪತ್ರೆಯಲ್ಲೇ ಲಭ್ಯವಾಗುವಂತೆ ಮಾಡಿಕೊಟ್ಟಿದ್ದನೆಂಬ ಆರೋಪ ಅವನ ಮೇಲಿದೆ.
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’