ರಾಜಕೀಯ ಪ್ರವೇಶದ ಕುರಿತು ಕಾಕ್ರೋಚ್ ಜನತಾ ಪಕ್ಷದ ನಿಲುವು

ನವದೆಹಲಿ – ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆಯ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ ಅವರು ತಮ್ಮ ಶಿಕ್ಷಣ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದು ಕಾಕ್ರೋಚ್ ಜನತಾ ಪಕ್ಷದ ಗೆಲುವು ಎಂದು ಹೇಳಲಾಗುತ್ತಿದೆ. 36 ದಿನಗಳ ಸುದೀರ್ಘ ಪ್ರತಿಭಟನೆಯನ್ನು ಹಿಂಪಡೆದ ನಂತರ, ‘ಅವರ ಪಕ್ಷ ರಾಜಕೀಯ ಪ್ರವೇಶಿಸಲಿದೆಯೇ?’ ಎಂದು ಪಕ್ಷದ ವಕ್ತಾರರನ್ನು ಪ್ರಶ್ನಿಸಲಾಯಿತು. ಈ ಕುರಿತು ಮಾತನಾಡಿದ ಪಕ್ಷದ ವಕ್ತಾರರಾದ ಆಶುತೋಷ ರಾಂಕಾ ಮತ್ತು ಸೌರವ ದಾಸ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.
ದಾಸ ಅವರು ಮಾತನಾಡುತ್ತಾ, ಯುವಕರ ಚಳವಳಿಗೆ ಶಕ್ತಿ ತುಂಬುವುದೇ ನಮ್ಮ ಮುಖ್ಯ ಆದ್ಯತೆಯಾಗಿದೆ. ಸದ್ಯಕ್ಕೆ ನಮ್ಮ ಧ್ಯೇಯವು ಈ ಚಳವಳಿಯನ್ನು ತಳಮಟ್ಟದವರೆಗೆ ಕೊಂಡೊಯ್ಯುವುದೇ ಆಗಿದೆ. ಭಾರತದಲ್ಲಿ ಈಗಾಗಲೇ 750 ರಿಂದ 800 ರಾಜಕೀಯ ಪಕ್ಷಗಳು ಅಸ್ತಿತ್ವದಲ್ಲಿದ್ದು, ಯಾವುದೇ ಪಕ್ಷವೂ ಯುವಕರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಚಳವಳಿಯನ್ನು ತಳಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಅವರು ಯುವಕರ ಬೇಡಿಕೆಗಳನ್ನು ಈಡೇರಿಸಲೇಬೇಕು ಮತ್ತು ಅವರಿಗಾಗಿ ಕೆಲಸ ಮಾಡಲೇಬೇಕು. ಇದೇ ನಮ್ಮ ನೀತಿಯಾಗಿದೆ ಎಂದು ಹೇಳಿದರು.
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!