ಮೆರವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಸಭ್ಯ ಘೋಷಣೆಗಳು ಮತ್ತು ನಿಂದನೆ!

ಮುಂಬಯಿ – ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆಯ ನಂತರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಈ ಹಿನ್ನೆಲೆಯಲ್ಲಿ ದಾದರ್ ರೈಲ್ವೆ ನಿಲ್ದಾಣದಿಂದ ಶಿವಾಜಿ ಪಾರ್ಕ್ವರೆಗೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ ಮತ್ತು ಎಂಎನ್ಎಸ್ ಪರವಾಗಿ ‘ತ್ರಿರಂಗ’ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ನೂರಾರು ಯುವಕರು ಭಾಗವಹಿಸಿದ್ದರು. ಮೆರವಣಿಗೆಯ ಸಮಾರೋಪ ಭಾಷಣದಲ್ಲಿ ಭಾಜಪ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಉದ್ಧವ್ ಠಾಕ್ರೆ, ‘ಜಿರಳೆ ವಿಷ್ಣುವಿನ ಅವತಾರ’ ಎಂಬ ಅರ್ಥಹೀನ ಮತ್ತು ಶ್ರೀವಿಷ್ಣುವಿಗೆ ಅವಮಾನಕರ ಹೇಳಿಕೆ ನೀಡಿದರು. ‘ಒಂದು ಜಿರಳೆ ಸರ್ವಾಧಿಕಾರಿಯನ್ನು ಸೋಲಿಸಿದೆ. ಇದು ನಿಜವಾದ ವಿಷ್ಣುವಿನ ಅವತಾರ’ ಎಂದು ಹೇಳಿದರು.
1. ಯಾವುದೇ ಸಭ್ಯ ವ್ಯಕ್ತಿ ಉಚ್ಚರಿಸಲು ಸಾಧ್ಯವಾಗದಂತಹ ಅತ್ಯಂತ ಅಸಭ್ಯ ಮತ್ತು ನಿಂದನೀಯ ಭಾಷೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.
2. ಮೆರವಣಿಗೆಯ ಕೊನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ‘‘ಇದು ಸಂಘರ್ಷದ ಆರಂಭ. ಭಾಜಪ ವಿರುದ್ಧ ಭಾರತ, ಎಂಬುದು ಈ ಸಂಘರ್ಷ. ಮೋದಿಜಿ, ನಿಮ್ಮ ಸಚಿವರು ಪಕ್ಷಗಳನ್ನು ಒಡೆಯುವುದರಲ್ಲಿ ನಿರತರಾಗಿದ್ದಾರೆ. ಈಗಲಾದರೂ ದೇಶದ ಕಡೆ ಗಮನ ಕೊಡಿ. ಸಂಘರ್ಷದ ಕಿಡಿ ಬಿದ್ದಿದೆ. ಅದರ ಕಾಡ್ಗಿಚ್ಚು ಇಡೀ ದೇಶಾದ್ಯಂತ ಹಬ್ಬುತ್ತಿದೆ.’ ಎಂದರು.
3. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ, ಮಾಜಿ ಸಂಸದ ಸಂಜಯ್ ರಾವತ್ ಸೇರಿದಂತೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಪಕ್ಷ ಹಾಗೂ ಎಂಎನ್ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾಂಗ್ರೆಸ್ ಮತ್ತು ಮಹಾವಿಕಾಸ ಮೈತ್ರಿ ಕೂಟದ ಇತರ ಪಕ್ಷಗಳೂ ಈ ಮೆರವಣಿಗೆಗೆ ಬೆಂಬಲ ನೀಡಿದ್ದವು.
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
ಶ್ರೀರಾಮಮಂದಿರದ ಕಾಣಿಕೆ ಕಳವು ಪ್ರಕರಣಕ್ಕೆ ಹೊಸ ವಿಶೇಷ ತನಿಖಾ ತಂಡ ರಚನೆ