ವಿದ್ಯಾರ್ಥಿಗಳ ಮೇಲಿನ ಲಾಠಿಪ್ರಹಾರದ ಕುರಿತು ಚರ್ಚಿಸಬೇಕೆಂದು ಪ್ರತಿಪಕ್ಷಗಳು ಆಗ್ರಹ

ನವದೆಹಲಿ – ಜುಲೈ 27 ರಂದು ಸಂಸತ್ತಿನಲ್ಲಿ ಪರೀಕ್ಷಾ ಸುಧಾರಣಾ ಮಸೂದೆಯ ಕುರಿತು ನಡೆಯಬೇಕಿದ್ದ ಚರ್ಚೆಯು ವಿರೋಧ ಪಕ್ಷದ ಸಂಸದರ ಗದ್ದಲದಿಂದಾಗಿ ನಡೆಯಲು ಸಾಧ್ಯವಾಗಲಿಲ್ಲ. ಜಂತರ್ ಮಂತರ್ನಲ್ಲಿ ಹಾಗೂ ಬಿಹಾರದ ಸಿವಾನ್ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಲಾಠಿಪ್ರಹಾರ ಮತ್ತು ಗುಂಡಿನ ದಾಳಿಯ ಘಟನೆಯ ಕುರಿತು ಚರ್ಚೆ ನಡೆಸಬೇಕು ಎಂಬುದು ಪ್ರತಿಪಕ್ಷಗಳ ಬೇಡಿಕೆಯಾಗಿತ್ತು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ಸಂಸದರಿಗೆ, ‘ನಾನು ಸಂಜೆ 5 ಗಂಟೆಯವರೆಗೆ ಸಮಯ ನೀಡುತ್ತೇನೆ. ಸರಕಾರ ಮತ್ತು ವಿರೋಧ ಪಕ್ಷದ ಸಂಸದರು ಈ ವಿಷಯದ ಕುರಿತು ಚರ್ಚಿಸಿ ವಿಷಯವನ್ನು ಮಂಡಿಸಬೇಕು’ ಎಂದು ಹೇಳಿದರು. ಆದರೆ ಈ ವಿಷಯದ ಕುರಿತು ಒಪ್ಪಿಗೆ ಮೂಡಲಿಲ್ಲ. ಅದಕ್ಕೂ ಮುನ್ನ ಲೋಕಸಭೆಯನ್ನು ಮೊದಲು ಮಧ್ಯಾಹ್ನ 12 ಗಂಟೆಯವರೆಗೆ, ನಂತರ 2 ಗಂಟೆಯವರೆಗೆ ಮುಂದೂಡಲಾಯಿತು. ರಾಜ್ಯಸಭೆಯ ಪರಿಸ್ಥಿತಿಯೂ ಹೀಗೆಯೇ ಇತ್ತು. ಇಲ್ಲೂ ಸದನವನ್ನು 2 ಬಾರಿ ಮುಂದೂಡಲಾಗಿತ್ತು. ನಂತರ ಸಂಜೆ 5.15 ಕ್ಕೆ ಇಡೀ ದಿನಕ್ಕೆ ಮುಂದೂಡಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷಾ ಸುಧಾರಣಾ ಮಸೂದೆಯನ್ನು ಮಂಡಿಸಿದರು.
ಇನ್ನೊಂದೆಡೆ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಯ ರಾಜೀನಾಮೆಯ ನಂತರ ಮೊದಲ ಬಾರಿಗೆ ಸಂಸತ್ತಿಗೆ ಆಗಮಿಸಿದರು. ಆಡಳಿತ ಪಕ್ಷದ ಸಂಸದರು ಅವರಿಗೆ ಶಾಲು ಹೊದಿಸಿ ಗೌರವಿಸಿ ಸಂಸತ್ ಭವನದ ಒಳಗಿನವರೆಗೆ ಕರೆದೊಯ್ದರು.
ಅಶ್ಲೀಲ ವಿಡಿಯೋ ಮೂಲಕ ೯ ಲಕ್ಷ ರೂಪಾಯಿ ಸುಲಿಗೆ ಮಾಡಿ ಕಾಲೇಜು ವಿದ್ಯಾರ್ಥಿಗೆ ವಂಚನೆ!
ಕಾಂಚೀಪುರಂ (ತಮಿಳುನಾಡು) ನಲ್ಲಿರುವ ಶ್ರೀ ಕಲ್ಯಾಣ ವರದ ದೇವಾಲಯದಲ್ಲಿ ಅರಳಿ ಮರ ನೆಟ್ಟಿದ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡ್ಗೀಳ್ !
ಆಂಧ್ರಪ್ರದೇಶ: ವೈ.ಎಸ್.ಆರ್. ಕಾಂಗ್ರೆಸ್ ಪಕ್ಷದ ನಾಯಕ ಜೋಗಿ ರಮೇಶ್ ಅವರ ಸೊಸೆಯಿಂದ ಕೌಟುಂಬಿಕ ಹಿಂಸಾಚಾರದ ದೂರು
‘ದೌರ್ಜನ್ಯಗಳಿಲ್ಲದೆ ಗೃಹ ಇಲಾಖೆಯನ್ನು ಸುಸೂತ್ರವಾಗಿ ಹೇಗೆ ನಡೆಸಬೇಕು ಎಂಬುದನ್ನು ಅಮಿತ್ ಶಹಾ ಅವರು ಕರ್ನಾಟಕದಿಂದ ಕಲಿಯಬೇಕು’!
ಕಾಕ್ರೋಚ್ ಜನತಾ ಪಕ್ಷದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ‘ಇ-೨೦ ಜನತಾ ಪಕ್ಷ’ದ ಸ್ಥಾಪನೆ
ಕಾಕ್ರೋಚ್ ಜನತಾ ಪಕ್ಷದಿಂದ ಪಂಚತಾರಾ ಹೋಟೆಲ್ ನಲ್ಲಿ ನೃತ್ಯ-ಗಾಯನದೊಂದಿಗೆ ಔತಣಕೂಟ!