‘ದೌರ್ಜನ್ಯಗಳಿಲ್ಲದೆ ಗೃಹ ಇಲಾಖೆಯನ್ನು ಸುಸೂತ್ರವಾಗಿ ಹೇಗೆ ನಡೆಸಬೇಕು ಎಂಬುದನ್ನು ಅಮಿತ್ ಶಹಾ ಅವರು ಕರ್ನಾಟಕದಿಂದ ಕಲಿಯಬೇಕು’!

  • ಸಚಿವ ಪ್ರಿಯಾಂಕ್ ಖರ್ಗೆ ಅವರ ವ್ಯಂಗ್ಯ ಹೇಳಿಕೆ

  • ಬೆಂಗಳೂರಿನಲ್ಲಿ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆಗೆ ಪೋಲಿಸ್ ನೆರವು ನೀಡಿದ ಕುರಿತು ಹೇಳಿಕೆ.

ಬೆಂಗಳೂರು – ನಗರದ ‘ಫ್ರೀಡಂ ಪಾರ್ಕ್’ನಲ್ಲಿ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ನನ್ನ ಇಲಾಖೆಯಿಂದ ಪೂರ್ಣ ಸಹಕಾರ ನೀಡಲಾಗುತ್ತಿದೆ. ಯಾವುದೇ ದೌರ್ಜನ್ಯವಿಲ್ಲದೆ ಅತ್ಯಂತ ಶಿಸ್ತಿನಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ಮೋದಿಯವರಿಗೆ ಬೆಂಗಳೂರಿನ ಪ್ರತಿಭಟನೆಯ ರೀಲ್ಸ್ (ಸಣ್ಣ ವೀಡಿಯೊಗಳನ್ನು) ಕಳುಹಿಸಿಕೊಡಿ. ದೌರ್ಜನ್ಯಗಳಿಲ್ಲದೆ ಗೃಹ ಇಲಾಖೆಯನ್ನು ಸುಸೂತ್ರವಾಗಿ ಹೇಗೆ ನಡೆಸುವುದು ಎಂಬುದನ್ನು ಅಮಿತ್ ಶಹಾ ಅವರು ಕರ್ನಾಟಕದಿಂದ ಕಲಿಯಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಹೇಳಿಕೆ ನೀಡಿದ್ದಾರೆ.

ಪ್ರತಿಭಟನಾಕಾರರು ಉಮರ್ ಖಾಲಿದ್ ಪರವಾಗಿ ಘೋಷಣೆಗಳನ್ನು ಕೂಗಿದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಖರ್ಗೆ, “ಅವನು ದೇಶದ್ರೋಹಿ ಎಂದು ನ್ಯಾಯಾಲಯ ಹೇಳಿದೆಯೇ? ಕೇಂದ್ರ ಸರಕಾರಕ್ಕೆ ಇದುವರೆಗೆ ದೋಷಾರೋಪಣೆ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಲು ಕೂಡ ಸಾಧ್ಯವಾಗಿಲ್ಲ” ಎಂದರು. (ಯಾವುದೇ ಮುಸ್ಲಿಂ ಆರೋಪಿಯ ವಿಷಯ ಬಂದಾಗ, ಕಾಂಗ್ರೆಸ್ ನಾಯಕರಿಗೆ ಪ್ರಜಾಪ್ರಭುತ್ವ, ನ್ಯಾಯಾಂಗ ವ್ಯವಸ್ಥೆ ಇತ್ಯಾದಿಗಳು ನೆನಪಾಗುತ್ತವೆ. ಇನ್ನೊಂದೆಡೆ ಹಿಂದೂ ರಾಷ್ಟ್ರಕ್ಕೆ ಆಗ್ರಹಿಸುವ ಹಿಂದುತ್ವನಿಷ್ಠರನ್ನು ಇದೇ ಕಾಂಗ್ರೆಸಿಗರು ದೇಶದ್ರೋಹಿಗಳು ಎಂದು ನಿಂದಿಸಿ ಸುಮ್ಮನಾಗುತ್ತಾರೆ! – ಸಂಪಾದಕರು)

ಸಂಪಾದಕೀಯ ನಿಲುವು

  • ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲವಿರುವಾಗ, ಕಥಿತ ವಿದ್ಯಾರ್ಥಿ ಪ್ರತಿಭಟನಾಕಾರರು ಹಿಂಸಾಚಾರ ಯಾಕೆ ಮಾಡುತ್ತಾರೆ? ಹಿಂಸಾತ್ಮಕ ಪ್ರತಿಭಟನಾಕಾರರಿಗಿಂತ ಸಚಿವರೇ ಮುಗ್ಧರಾಗಿದ್ದಾರೆಂದು ಹೇಳಬೇಕಾಗುತ್ತದೆ!
  • ಹಿಂದುತ್ವನಿಷ್ಠರ ಪ್ರತಿಭಟನೆಯನ್ನು ಹತೋಟಿಗೆ ತರುವ ಖರ್ಗೆಯವರ ದ್ವಂದ್ವ ನೀತಿಯನ್ನು ತಿಳಿಯಿರಿ!