-
ಭಾರತೀಯ ಸೇನೆಯಿಂದ ಭಯೋತ್ಪಾದಕರ ೩ ‘ಲಾಂಚ್ ಪ್ಯಾಡ್’ ಧ್ವಂಸ
-
೬ ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರಿಗೆ ಗಾಯ


ಮೆಂಢರ್ (ಜಮ್ಮು – ಕಾಶ್ಮೀರ) – ಮೆಂಢರ್ ಸೆಕ್ಟರ್ನ ನಿಯಂತ್ರಣ ರೇಖೆ ಬಳಿ ಸೈನಿಕರು ನುಸುಳುತ್ತಿದ್ದ ೧೩ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ, ಎಂದು ‘ಅಮರ್ ಉಜಲಾ’ ದಿನಪತ್ರಿಕೆ ವರದಿ ಮಾಡಿದೆ. ಮೆಂಢರ ಸೆಕ್ಟರಿನ ಗಡಿಯಾಚೆಗಿನ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿಖಿಯಾಲ್ ಪ್ರದೇಶದಲ್ಲಿ ಭಯೋತ್ಪಾದಕರ ೩ ‘ಲಾಂಚಿಂಗ್ ಪ್ಯಾಡ್’(ತರಬೇತಿ ಪಡೆದ ಭಯೋತ್ಪಾದಕರನ್ನು ನುಸುಳಲು ಗಡಿಯ ಹತ್ತಿರ ತಾಣದಲ್ಲಿ ಒಟ್ಟಿಗೆ ಸೇರಿಸುತ್ತಾರೆ ಆ ಸ್ಥಳವನ್ನು ‘ಲಾಂಚಿಂಗ್ ಪ್ಯಾಡ್’ ಎಂದು ಹೇಳುತ್ತಾರೆ)ಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಈ ಘಟನೆಯಲ್ಲಿ ೬ ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಗಾಯಗೊಂಡಿದ್ದಾರೆ. ಹತ್ಯೆಗೀಡಾದ ಉಗ್ರರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲಭ್ಯವಾಗಿದೆ.
ಇಲ್ಲಿ ಹಲವಾರು ದಿನಗಳಿಂದ ಪಾಕ್ನಿಂದ ಕದನವಿರಾಮವನ್ನು ಉಲ್ಲಂಘಿಸಿ ಗುಂಡು ಹಾರಾಟ ಮಾಡಲಾಗುತ್ತಿತ್ತು. ಭಯೋತ್ಪಾದಕರನ್ನು ಒಳನುಸುಳಲೆಂದು ಪಾಕಿಸ್ತಾನವು ಈ ಪ್ರಯತ್ನವನ್ನು ಮಾಡುತ್ತಿತ್ತು. ಅದಕ್ಕೆ ಭಾರತೀಯ ಸೇನೆಯು ನೀಡಿದ ಪ್ರತ್ಯುತ್ತರದಲ್ಲಿ ಗುಂಡಿನ ದಾಳಿ ನಡೆಯುತ್ತಿದ್ದ ಪ್ರದೇಶವನ್ನೇ ಧ್ವಂಸ ಮಾಡಿದೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!