-
ದೇಶದಾದ್ಯಂತ ಹಿಂದೂ ನಾಯಕರು, ಸಾಧು-ಸಂತರ ಮೇಲಿಂದ ಮೇಲೆ ಹತ್ಯೆಯಾಗುತ್ತಿರುವಾಗ, ಅದನ್ನು ತಡೆಯಲು ಸರ್ಕಾರಿ ಮಟ್ಟದಲ್ಲಿ ಯಾವುದೇ ಪ್ರಯತ್ನಗಳು ನಡೆಯುತ್ತಿಲ್ಲ, ಇದು ಖೇದಕರವಾಗಿದೆ ! ಅದಕ್ಕಾಗಿ ಹಿಂದೂಗಳು ಸಂಘಟಿತರಾಗಿ ಕಾನೂನು ಮಾರ್ಗವಾಗಿ ಧ್ವನಿ ಎತ್ತಬೇಕು !
-
ಬಿಗಿ ಭದ್ರತೆಯಲ್ಲಿರುವ ರಾಜಧಾನಿಯಂತಹ ಸ್ಥಳದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಪೊಲೀಸರಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ನಾಚಿಕೆಗೇಡಿನ ಸಂಗತಿ ! ಇದರಿಂದ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದು ಗಮನಕ್ಕೆ ಬರುತ್ತದೆ !

ನವ ದೆಹಲಿ : ಪೂರ್ವ ದೆಹಲಿಯ ಪಶ್ಚಿಮ ವಿನೋದನಗರದಲ್ಲಿ ಬಿಜೆಪಿ ನಾಯಕ ರಾಹುಲ್ ಸಿಂಗ್ ಊರ್ಫ್ ಭೂರು ಸಿಂಗ್ನನ್ನು ಅಜ್ಞಾತರು ಗುಂಡಿಕ್ಕಿ ಕೊಂದಿದ್ದರು. ಜೂನ್ ೩ ರ ಬೆಳಿಗ್ಗೆ ರಾಹುಲ್ ಸಿಂಗ್ ಅವರು ವಾಯುವಿಹಾರಕ್ಕಾಗಿ ಹೊರಟಿದ್ದಾಗ ಮಯೂರ್ ಪಬ್ಲಿಕ್ ಸ್ಕೂಲ್ ಬಳಿ ಅಜ್ಞಾತರು ಅವರ ಮೇಲೆ ಆರು ಬಾರಿ ಗುಂಡುಗಳನ್ನು ಹಾರಿಸಿದರು. ಎಂಟು ತಿಂಗಳ ಹಿಂದೆಯೇ ರಾಹುಲ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಆ ಸಮಯದಲ್ಲಿ ಅವರು ತಪ್ಪಿಸಿಕೊಂಡಿದ್ದರು. ಪರಸ್ಪರ ವಿವಾದದಿಂದಾಗಿ ರಾಹುಲ್ ಸಿಂಗ್ ಇವರ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ರಾಹುಲ್ ಅವರ ಶವವನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!