ಕಠಿಣ ನಿರ್ಧಾರಗಳನ್ನು ತೆಗೆದುಕೊಂಡ ಭಾರತ ಸರ್ಕಾರಕ್ಕೆ ಅಭಿನಂದನೆಗಳು !

ನವ ದೆಹಲಿ : ಭಾರತ ಸರ್ಕಾರವು ಧಾರ್ಮಿಕ ಸ್ವಾತಂತ್ರ್ಯದಂತಹ ವಿಷಯಗಳ ಬಗ್ಗೆ ಸಲಹೆ ನೀಡುವ ಅಮೇರಿಕಾದ ಸಂಸತ್ತಿನ ಖಾಸಗಿ ಸಂಸ್ಥೆಯಾದ ‘ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾನಾಷನಲ್ ರಿಲಿಜಿಯಸ್ ಫ್ರೀಡಂ’ನ ಸದಸ್ಯರಿಗೆ ವೀಸಾ ನಿರಾಕರಿಸಿದೆ. ವಿದೇಶಾಂಗ ಸಚಿವ ಎಸ್. ಜಯಶಂಕರ ಇವರು ಜೂನ್ ೧ ರಂದು ಬಿಜೆಪಿ ಸಂಸದ ನಿಶಿಕಾಂತ ದುಬೆ ಅವರಿಗೆ ಬರೆದ ಪತ್ರದಲ್ಲಿ ಈ ಮಾಹಿತಿ ನೀಡಲಾಗಿದೆ. ಈ ಸಂಸ್ಥೆಯು ಎಪ್ರಿಲ್ನಲ್ಲಿ ಅಮೇರಿಕಾ ಸರಕಾರಕ್ಕೆ ಸಲಹೆಯನ್ನು ನೀಡುತ್ತಿರುವಾಗ ಭಾರತವನ್ನು ಧಾರ್ಮಿಕ ಸ್ವಾತಂತ್ರ್ಯ ಮಟ್ಟದಲ್ಲಿ ೧೪ ಚಿಂತಾಜನಕ ದೇಶಗಳ ಪಟ್ಟಿಯಲ್ಲಿ ಸೇರಿಸಲು ಅಮೇರಿಕ ಸರ್ಕಾರಕ್ಕೆ ಸಲಹೆ ನೀಡಿತ್ತು. ಗುಜರಾತ್ನಲ್ಲಿ ೨೦೦೨ ರ ಗಲಭೆಯ ನಂತರ ಈ ಸಂಸ್ಥೆಯು ಸಲಹೆ ನೀಡಿತ್ತು. ತದನಂತರ ಪುನಃ ಅದೇ ಸಲಹೆಯನ್ನು ನೀಡಲಾಗಿದೆ.
ಜಯಶಂಕರ ಅವರು ದುಬೆಯವರಿಗೆ ಕಳುಹಿಸಿದ ಪತ್ರದಲ್ಲಿ, ‘ಭಾರತೀಯ ನಾಗರಿಕರ ಸ್ಥಿತಿ ಮತ್ತು ಅವರ ಸಾಂವಿಧಾನಿಕ ಹಕ್ಕುಗಳ ಬಗ್ಗೆ ನಾವು ಈ ಆಯೋಗದಿಂದ ಕೇಳುವ ಅಗತ್ಯವಿಲ್ಲ. ಈ ಆಯೋಗವು ಮೊದಲಿನಿಂದಲೂ ಪಕ್ಷಪಾತ, ತಪ್ಪು ಮಾಹಿತಿ ನೀಡುವ, ಅಯೋಗ್ಯ ಪ್ರತಿಕ್ರಿಯೆಯನ್ನು ನೀಡುವ ಮತ್ತು ವೈಶಿಷ್ಟ್ಯವೆಂದರೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಅಂಶಗಳ ಬಗ್ಗೆ ತಪ್ಪು ಮಾಹಿತಿಯನ್ನು ನೀಡುವ ಎಂದು ಹೆಸರುವಾಸಿಯಾಗಿದೆ. ನಾವು ಅವರ ವರದಿಯನ್ನು ಖಂಡಿಸಿದ್ದೇವೆ’ ಎಂದು ಹೇಳಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!