‘ಆನ್‌ಲೈನ್ ೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ನಿಮಿತ್ತ ಪತ್ರಿಕಾಗೋಷ್ಠಿ !

ಸಂವಿಧಾನದಲ್ಲಿ ಜಾತ್ಯತೀತ ಪದವನ್ನು ಅಳಿಸುವ ಮೂಲಕ ಭಾರತವನ್ನು ಸಾಂವಿಧಾನಿಕ ಹಿಂದೂ ರಾಷ್ಟ್ರವೆಂದು ಘೋಷಿಸಿ ! – ಸದ್ಗುರು (ಡಾ) ಚಾರುದತ್ತ ಪಿಂಗಳೆ

ಫೋಂಡಾ (ಗೋವಾ) – ಮೋದಿ ಸರಕಾರ ಕೇಂದ್ರದಲ್ಲಿ ಎರಡನೆಯ ಬಾರಿ ಅಧಿಕಾರಕ್ಕೆ ಬಂದ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿಯ ದೃಷ್ಟಿಯಿಂದ ಕಲಮ್ ೩೭೦ ರದ್ದುಗೊಳಿಸುವುದು, ಪೌರತ್ವ ತಿದ್ದುಪಡಿ ಕಾನೂನು (ಸಿ.ಎ.ಎ.), ಸರ್ವೋಚ್ಚ ನ್ಯಾಯಾಲಯವು ರಾಮಮಂದಿರದ ಪರವಾಗಿ ನೀಡಿದ ಐತಿಹಾಸಿಕ ತೀರ್ಪು, ಅಲ್ಲದೇ ೫ ಆಗಸ್ಟ್ ೨೦೨೦ ರಂದು ಆಯೋಜಿಸಲಾಗಿರುವ ರಾಮ ಮಂದಿರದ ಭೂಮಿ ಪೂಜೆ ಮುಂತಾದ ಸಕಾರಾತ್ಮಕ ವಿಷಯಗಳು ಘಟಿಸುತ್ತಿವೆ. ಇದರಲ್ಲಿ ಪೌರತ್ವ ತಿದ್ದುಪಡಿ ಕಾನೂನು ‘ಅಖಿಲ ಭಾರತೀಯ ಹಿಂದೂ ರಾಷ್ಟ್ರಅಧಿವೇಶನದ ಫಲವಾಗಿದೆ. ೨೦೧೪ ರಲ್ಲಿ ‘ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಆ ರೀತಿಯ ಠರಾವನ್ನು ಅಂಗೀಕರಿಸಲಾಗಿತ್ತು. ‘ಸೆಕ್ಯುಲರ್ ಪಕ್ಷಗಳ ಅಧಿಕಾರವಿರುವ ರಾಜ್ಯಗಳಲ್ಲಿ ‘ಸಿ.ಎ.ಎ. ಜಾರಿಗೊಳಿಸ ದಿರುವುದು ಮತ್ತು ಹಿಂದೂ ಬಹುಸಂಖ್ಯಾತ ಭಾರತದಲ್ಲಿ ನೊಂದ ಹಿಂದೂಗಳಿಗೆ ನ್ಯಾಯ ಸಿಗದಿರುವುದು, ಇದು ಮಾನವತೆಯ ಹಾಗೆಯೇ ಪ್ರಜಾಪ್ರಭುತ್ವದ ವೈಫಲ್ಯವಾಗಿದೆ. ೨೦೧೧ ರ ಜನಗಣತಿಗನುಸಾರ ‘೨೦೬೧ ರಲ್ಲಿ ಭಾರತದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುವರು ಎನ್ನುವಂತಹ ಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಹಿಂದೂಗಳಿಗೆ ಅವರ ನ್ಯಾಯಯುತ ಹಕ್ಕುಗಳು ದೊರಕಲು ಭಾರತವನ್ನು ‘ಹಿಂದೂ ರಾಷ್ಟ್ರವೆಂದು ಘೋಷಿಸಬೇಕು, ಈ ಪ್ರಮುಖ ಬೇಡಿಕೆಗಳಿಗಾಗಿ ‘೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವನ್ನು ಆಯೋಜಿಸಲಾಗಿದೆ, ಎಂಬ ಮಾಹಿತಿಯನ್ನು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು (ಡಾ.) ಚಾರುದತ್ತ ಪಿಂಗಳೆಯವರು ನೀಡಿದರು. ಅವರು ‘೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಮಾಹಿತಿಯನ್ನು ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಸದ್ಗುರು (ಡಾ.) ಪಿಂಗಳೆಯವರು ಮುಂದೆ ಮಾತನಾಡುತ್ತಾ, “ಈ ಅಧಿವೇಶನವನ್ನು ೩೦ ಜುಲೈರಿಂದ ೨ ಆಗಸ್ಟ್ ಮತ್ತು ೬ ರಿಂದ ೯ ಆಗಸ್ಟ್ ೨೦೨೦ ಈ ಕಾಲಾವಧಿಯಲ್ಲಿ ಸಾಯಂಕಾಲ ೬.೩೦ ರಿಂದ ೮.೩೦ ಈ ಸಮಯದಲ್ಲಿ ‘ಆನ್‌ಲೈನ್ ಪದ್ಧತಿಯಲ್ಲಿ ನಡೆಸಲಾಗುವುದು. ೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ದೇಶ-ವಿದೇಶಗಳಿಂದ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ನ್ಯಾಯವಾದಿಗಳು, ವಿಚಾರವಂತರು, ಸಂಪಾದಕರು, ಉದ್ಯಮಿಗಳು ಮುಂತಾದವರು ಬೃಹತ್ ಸಂಖ್ಯೆಯಲ್ಲಿ ‘ಆನ್‌ಲೈನ್ ಪದ್ಧತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅಧಿವೇಶನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿದ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು, ‘ಕಳೆದ ೮ ವರ್ಷಗಳಿಂದ ಗೋವಾದಲ್ಲಿ ನಡೆಯುತ್ತಿರುವ ಈ ಅಧಿವೇಶನಕ್ಕೆ ಅತ್ಯುತ್ತಮ ಸ್ಪಂದನ ದೊರಕಿತ್ತು; ಆದರೆ ‘ಕೋವಿಡ್-೧೯ ರ ವಿಪತ್ತಿನಿಂದಾಗಿ ಈ ಬಾರಿಯ ಅಧಿವೇಶನವನ್ನು ಆನ್‌ಲೈನ್ ಪದ್ಧತಿಯಲ್ಲಿ ನಡೆಸಬೇಕಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆಗೆ ಕೆಲವು ‘ಸೆಕ್ಯುಲರ್(ಜಾತ್ಯತೀತ)ವಾದಿಗಳು ಅಡ್ಡಿ ಪಡಿಸುತ್ತಿದ್ದಾರೆ. ತದ್ವಿರುದ್ಧ ಪಾಕಿಸ್ತಾನದಲ್ಲಿ ಒಂದು ದೇವಸ್ಥಾನವನ್ನು ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ಪಾಕಿಸ್ತಾನದಲ್ಲಿ ದೇವಸ್ಥಾನಕ್ಕೆ ಸ್ಥಾನವಿಲ್ಲ ಎಂದು ಅಲ್ಲಿಯ ಜನರು ಹೇಳುತ್ತಿದ್ದಾರೆ. ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಮಾತ್ರ ಮಸೀದಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದುದರಿಂದ ಭಾರತವನ್ನು ಈಗಲಾದರೂ ‘ಹಿಂದೂ ರಾಷ್ಟ್ರವೆಂದು ಘೋಷಿಸಲ್ಪಡಬೇಕು. ಹಿಂದೂ ಸಂಘಟನೆ ಮತ್ತು ಸಂಪ್ರದಾಯಕ್ಕಾಗಿ ಅಂದರೆ ರಾಷ್ಟ್ರಹಿತ ಮತ್ತು ಧರ್ಮಹಿತಕ್ಕಾಗಿ ಯೋಗದಾನ ನೀಡುವುದು ಹಾಗೂ ಸಮಾನ ಕೃತಿಯ ಕಾರ್ಯಕ್ರಮವನ್ನು ನಿರ್ಧರಿಸುವುದು ಅದರೊಂದಿಗೆ ಹಿಂದೂಹಿತದ ನಿರ್ಣಯವನ್ನು ಅಂಗೀಕರಿಸುವುದು ಈ ‘ಆನ್‌ಲೈನ್ ಅಧಿವೇಶನದ ಸ್ವರೂಪವಾಗಿರಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಮಾತನಾಡುತ್ತಾ, “ಮುಂಬರುವ ಆಪತ್ಕಾಲದ ದೃಷ್ಟಿಯಿಂದ ಹಿಂದೂಗಳಿಗೆ ಸಹಾಯ ಮಾಡಲು ಹಿಂದುತ್ವ
ನಿಷ್ಠರು ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕಾಗಿದೆ. ಈ ಸೇವಾಕಾರ್ಯದ ತರಬೇತಿಯನ್ನು ನೀಡಲು ‘ಹಿಂದೂ ರಾಷ್ಟ್ರ ಸಂಘಟಕ ಅಧಿವೇಶನವನ್ನು ೧೩ ರಿಂದ ೧೬ ಆಗಸ್ಟ್ ಈ ಕಾಲಾವಧಿಯಲ್ಲಿ ಆಯೋಜಿಸಲಾಗಿದೆ, ಎಂದರು. ಈ ಅಧಿವೇಶನವನ್ನು ಈ ಕೆಳಗಿನ ‘ಲಿಂಕ್ಗಳಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದು ಇದನ್ನು ಎಲ್ಲರೂ ವೀಕ್ಷಿಸಬಹುದಾಗಿದೆ. ಹಿಂದುತ್ವನಿಷ್ಠರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಸಮಿತಿಯ ವತಿಯಿಂದ ಕರೆ ನೀಡಲಾಗಿದೆ.

YouTube Channel : HinduJagruti

Twitter : @HinduJagrutiOrg

Facebook page : /HinduAdhiveshan

ವಿದೇಶಿಯರಿಗೂ ಅರ್ಥವಾಗುತ್ತಿರುವ ಹಿಂದೂ ಧರ್ಮದ ಶ್ರೇಷ್ಠತೆ !

‘ಅನೇಕ ವಿದೇಶಿಯರು ಹಿಂದೂ ಧರ್ಮದತ್ತ ಸೆಳೆಯಲ್ಪಡುತ್ತಿದ್ದಾರೆ. ಇದರ ಬಗ್ಗೆ ಏನು ಹೇಳಲಿಕ್ಕಿದೆ ?, ಈ ಪ್ರಶ್ನೆಗೆ ಉತ್ತರಿಸುತ್ತಿರುವಾಗ ಶ್ರೀ. ಚೇತನ ರಾಜಹಂಸ ಇವರು, ‘ಇಂದು ಇಡೀ ಜಗತ್ತು ಹಿಂದೂವಾಗಲು ಕಾತುರಗೊಂಡಿದೆ. ಕೊರೋನಾ ಮಹಾಮಾರಿಯ ಕಾಲದಲ್ಲಿ ಹಲವಾರು ದೇಶಗಳು ಕೈ ಮುಗಿದು ನಮಸ್ಕಾರ ಮಾಡುತ್ತಿದೆ. ಒಂದು ಅಧ್ಯಯನಕ್ಕನುಸಾರ ರಶಿಯಾದ ಶೇ. ೨೫ ರಷ್ಟು ಜನರು ಹಿಂದೂ ಧರ್ಮಕ್ಕೆ ಬರಲಿಚ್ಛಿಸುತ್ತಿದ್ದಾರೆ. ಕೊರೋನಾದ ಹಾವಳಿಯ ನಂತರ ಅಮೇರಿಕಾದ ೪ ವಿದ್ಯಾಪೀಠಗಳು ಹಿಂದೂ ತತ್ತ್ವಜ್ಞಾನಕ್ಕನುಸಾರ ಪಠ್ಯಕ್ರಮ ವನ್ನು ಆರಂಭಿಸಿವೆ. ಇಂಡೋನೇಶಿಯಾ ಧರ್ಮದಿಂದ ಇಸ್ಲಾಮ ಆಗಿದ್ದರೂ, ಸಂಸ್ಕೃತಿಯಿಂದ ಹಿಂದೂ ಆಗಿದೆ ಹೀಗೆ ಇಡೀ ಜಗತ್ತು ಹಿಂದುತ್ವದತ್ತ ಹೊರಳುವ ಪ್ರಕ್ರಿಯೆ ಆರಂಭವಾಗಲಿದೆ, ಎಂಬುದು ಕಂಡು ಬರುತ್ತದೆ, ಎಂದರು